ಮಾಜಿ ಶಾಸಕ ವೆಂಕಟಸ್ವಾಮಿ ಹೃದಯಾಘಾತದಿಂದ ನಿಧನ

Prasthutha|

ಬೆಂಗಳೂರು: ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​​ನ ಮಾಜಿ ಶಾಸಕ ವೆಂಕಟಸ್ವಾಮಿ (53) ಹೃದಯಾಘಾತದಿಂದ ನಿಧನರಾಗಿದ್ದಾರೆ.

- Advertisement -

ವೆಂಕಟಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಲ್ಲಿ ಮೂರು ಬಾರಿ ಎದೆ ನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯರಾತ್ರಿ 02:20ಕ್ಕೆ ಆಸ್ವತ್ರೆಯಲ್ಲಿ ಕೊನೆಯುಸಿರೆಳೆದರು.

ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಮಾಡುತ್ತಿದ್ದ ವೆಂಕಟಸ್ವಾಮಿ ಅವರಿಗೆ 2023ರ ಮಾರ್ಚ್ 21 ರಂದು ಪ್ರಚಾರ ಮುಗಿಸಿ ಮನೆಗೆ ಬಂದಾಗ ಹೃದಯಾಘಾತವಾಗಿತ್ತು. ಕೂಡಲೆ ವೆಂಕಟಸ್ವಾಮಿಯವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

Join Whatsapp