ಸಿಎಂ ಬೊಮ್ಮಾಯಿ ಕ್ಷೇತ್ರದ ಮಾಜಿ ಸಂಸದ ಹಾಗೂ ಪುತ್ರ ಬಿಜೆಪಿಗೆ ರಾಜೀನಾಮೆ

Prasthutha|

ಹಾವೇರಿ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕ್ಷೇತ್ರದ ಮಾಜಿ ಸಂಸದ ಮಂಜುನಾಥ್ ಕುನ್ನೂರು ಹಾಗೂ ಅವರ ಪುತ್ರ ರಾಜು ಕುನ್ನೂರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಇದೇ ವೇಳೆ ಕಾಂಗ್ರೆಸ್’ಗೆ ಸೇರುವ ಮೂಲಕ ಬಿಜೆಪಿ ಪಕ್ಷಕ್ಕೆ ಶಾಕ್ ನೀಡಿದ್ದಾರೆ.

- Advertisement -


ಸೋಮವಾರ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಮಂಜುನಾಥ್ ಕುನ್ನೂರು ಶಿಗ್ಗಾಂವಿ ಕ್ಷೇತ್ರದಿಂದ ಎರಡು ಭಾರಿ ಶಾಸಕರಾಗಿದ್ದರು. 1989-1994 ಮತ್ತು 1994-1999 ರ ಅವಧಿಯಲ್ಲಿ ಶಾಸಕರಾಗಿದ್ದು, 2004ರಲ್ಲಿ ಧಾರವಾಡ ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಸಂಸದರಾಗಿ ಆಯ್ಕೆಯಾದರು.

Join Whatsapp