Home ಟಾಪ್ ಸುದ್ದಿಗಳು ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸ್ಪೀಕರ್ ರಮೇಶ್ ಕುಮಾರ್

ಶ್ರೀನಿವಾಸಪುರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ತಮ್ಮ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಗೆ ನಿಲ್ಲುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಹೇಳಿದ್ದಾರೆ.

ಹುಟ್ಟೂರು ಶ್ರೀನಿವಾಸಪುರ ತಾಲ್ಲೂಕು ಅಡ್ಡಗಲ್​ ಗ್ರಾಮದಲ್ಲಿ ಇಂದು ನಡೆದ ಕೋಲಾರ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ. ಗೌತಮ್​ ಪರ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ. ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ ಎಂದು ತಿಳಿಸಿದರು.

ದುಡ್ಡು ತೆಗೆದುಕೊಂಡು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ನನೆಗೆ ಮೋಸ ಮಾಡಿ ಸೋಲಿಸಿದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು. ಅಧಿಕಾರದಾಸೆಗೆ ಅನೈತಿಕ ರಾಜಕಾರಣ ಮಾಡುತ್ತಿದ್ದಾರೆ. ಅವರು ಸರ್ವನಾಶವಾಗುತ್ತಾರೆ. ಆದರೆ ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರೀಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಘೋಷಿಸಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ಮತ ಕೇಳಲು ನಿಮ್ಮ ಮುಂದೆ ಬರುವುದಿಲ್ಲ. ರಮೇಶ್​ ಕುಮಾರ್ ಉತ್ತರಾಧಿಕಾರಿಯಾಗಿ ನನ್ನ ಮಗ ಹರ್ಷ ಕೂಡ ಮತ ಕೇಳಲು ಬರುವುದಿಲ್ಲ ಎಂದು ಹೇಳಿದ ಬಳಿಕ, ನನಗೆ ಮೋಸ ಮಾಡಿದವರಿಗೆ ಎಂತಹ ಸ್ಥಿತಿ ಬರಲಿದೆ ಕಾದು ನೋಡಿ ಎಂದು ತಮ್ಮ ಸೋಲಿನ ಕಹಿ ಘಟನೆ ನನೆದು ಭಾವುಕರಾಗಿ ಮಾತನಾಡಿದರು.

Join Whatsapp
Exit mobile version