ದರ್ಶನ್ ಗ್ಯಾಂಗ್‌‌ನ ನಾಲ್ವರು ಆರೋಪಿಗಳು ತುಮಕೂರು ಜೈಲಿಗೆ

Prasthutha|

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಗ್ಯಾಂಗ್‌‌ನ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಸ್ಥಳಾಂತರ ಮಾಡಲು ನ್ಯಾಯಾಲಯ ಅದೇಶ ನೀಡಿದೆ.

- Advertisement -

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಒಂದೇ ಕಡೆ ಇರುವುದು ಸುರಕ್ಷಿತವಲ್ಲ. ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ದಿನವೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂರ್ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಇಂದು ದರ್ಶನ್ ಗ್ಯಾಂಗ್‌ ಬಗ್ಗೆ ವಿಚಾರಣೆ ನಡೆಸಿದ 24ನೇ ಎಸಿಎಂಎಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಾಲ್ವರು ಆರೋಪಿಗಳನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲು ಒಪ್ಪಿಗೆ ಸೂಚಿಸಿದೆ.

ಕಾರ್ತಿಕ್, ಕೇಶವಮೂರ್ತಿ,ನಿಖಿಲ್ ನಾಯಕ್ ಮತ್ತು ರವಿಶಂಕರ್ ತುಮಕೂರು ಜೈಲಿಗೆ ಶಿಫ್ಟ್ ಆಗಲಿರುವ ಆರೋಪಿಗಳು.

- Advertisement -

ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರ ಮುಂದೆ ಶರಣಾಗಿದ್ದ ಆರೋಪಿಗಳಾದ ಕಾರ್ತಿಕ್‌, ಕೇಶವ್ & ನಿಖಿಲ್ ಈ ಮೂವರು ಕೊಲೆ ಬಗ್ಗೆ ಪೊಲೀಸರ ಮುಂದೆ ಸಂಪೂರ್ಣ ಮಾಹಿತಿಯನ್ನು ಬಾಯ್ಬಿಟ್ಟಿದ್ದರು. ಈ ಮೂವರು ನೀಡಿದ ಮಾಹಿತಿಯಿಂದಲೇ ಕೊಲೆ ಕೇಸ್‌ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಅರೆಸ್ಟ್ ಆಗಿತ್ತು.

ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಆರೋಪಿಗಳ ಜೈಲು ಬದಲಿಸುವುದು ಸೂಕ್ತ ಎಂದು ಪೊಲೀಸರು ಹೇಳಿದ್ದರು.

Join Whatsapp