ಕೇಂದ್ರ ಸಚಿವರನ್ನು ಬಂದೂಕು ಸಿಡಿಸಿ ಸ್ವಾಗತಿಸಿದ ಪ್ರಕರಣ| ನಾಲ್ವರು ಬಿಜೆಪಿ ಕಾರ್ಯಕರ್ತರ ಬಂಧನ

Prasthutha|

ಯಾದಗಿರಿ : ಕೇಂದ್ರ ಸರ್ಕಾರದ ಸಚಿವ ಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾದ ರಾಜ್ಯದ ಸಚಿವರನ್ನು ಜನತೆಗೆ ಪರಿಚಯಿಸಲು ಬಿಜೆಪಿ ಜನಾಶೀರ್ವಾದ ಯಾತ್ರೆ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಯಾತ್ರೆಗಾಗಿ ಯಾದಗಿರಿಗೆ ಆಗಮಿಸಿದ್ದ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿದ್ದು ಬುಧವಾರ ವರದಿಯಾಗಿದೆ.

- Advertisement -

ಖೂಬಾ ಅವರ ಸ್ವಾಗತಕ್ಕೆ ಯರಗೋಳ ಗ್ರಾಮದ ಸ್ಥಳೀಯ ಬಿಜೆಪಿ ಕಾರ್ಯಕರ್ತರು ನಾಡ ಬಂದೂಕು ಸಿಡಿಸಿ ಸ್ವಾಗತ ಮಾಡಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಕನಿಷ್ಠ ನಾಲ್ವರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಮಧ್ಯೆ ಕೊರೊನಾ ನಿಯಮಗಳನ್ನು ಮೀರಿ ನೂರಾರು ಜನ ಸಚಿವರ ಸ್ವಾಗತಕ್ಕೆ ಸೇರಿದ್ದು ಕೂಡಾ ಜನಾಕ್ರೋಶಕ್ಕೆ ಗುರಿಯಾಗಿದೆ. ಕಲಬುರ್ಗಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಖೂಬಾ ಅವರ ಜನಾಶೀರ್ವಾದ ಕಾರ್ಯಕ್ರಮದಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿದ್ದಾರೆಂದು ನಗರದ ಬ್ರಹ್ಮಪುರ ಠಾಣೆ ಪೊಲೀಸರು ಬಿಜೆಪಿ ಜಿಲ್ಲಾ ಮುಖಂಡರ ವಿರುದ್ಧ ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

Join Whatsapp