Home ಟಾಪ್ ಸುದ್ದಿಗಳು ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ಮೃತ್ಯು

ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳು ಮೃತ್ಯು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಜೀವನ್ (13), ಸಾತ್ವಿಕ್ (11) ವಿಶ್ವ(12), ಪೃಥ್ವಿ (12 )ಸಾವನ್ನಪ್ಪಿದ್ದ ಮಕ್ಕಳು.


ಮೃತ ಮಕ್ಕಳು ಮುತ್ತಿಗೆ ಗ್ರಾಮದವರಾಗಿದ್ದಾರೆ.ಶಾಲೆಗೆ ರಜೆ ಇರುವುದರಿಂದ ಕೆರೆಗೆ ಐವರು ಬಾಲಕರು ಈಜಲು ತೆರಳಿದ್ದರು. ಈ ಪೈಕಿ ಓರ್ವ ಬಾಲಕ ಪಾರಾಗಿ ಸಮೀಪದಲ್ಲಿದ್ದವರಿಗೆ ತಿಳಿಸಿದ್ದಾನೆ. ನಿವಾಸಿಗಳು ಕೆರೆ ಬಳಿ ಬಂದು ನೋಡುವಷ್ಟರಲ್ಲಿ ನಾಲ್ವರು ಬಾಲಕರು ಮೃತಪಟ್ಟಿದ್ದಾರೆ.

Join Whatsapp
Exit mobile version