Home ಟಾಪ್ ಸುದ್ದಿಗಳು ಅಂಗನವಾಡಿ ಮೇಲ್ಚಾವಣಿಯ ಕಾಂಕ್ರೀಟ್ ಉದುರಿ ಬಿದ್ದು ನಾಲ್ಕು ಮಕ್ಕಳಿಗೆ ಗಾಯ

ಅಂಗನವಾಡಿ ಮೇಲ್ಚಾವಣಿಯ ಕಾಂಕ್ರೀಟ್ ಉದುರಿ ಬಿದ್ದು ನಾಲ್ಕು ಮಕ್ಕಳಿಗೆ ಗಾಯ

ಕೊಪ್ಪಳ: ಅಂಗನವಾಡಿ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ ದಿಢೀರನೆ ಉದುರಿ ಬಿದ್ದಿದ್ದರಿಂದ ನಾಲ್ವರು ಮಕ್ಕಳು ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ನಗರದಲ್ಲಿ ನಡೆದಿದೆ.

ಮಹೆಬೂಬ್ ನಗರದಲ್ಲಿರೋ 11 ನೇ ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕಾಂಕ್ರಿಟ್ ಉದುರಿ ಬಿದ್ದಿದೆ.

ಇಂದು ಮುಂಜಾನೆ ಅಂಗನವಾಡಿಗೆ 20ಕ್ಕೂ ಹೆಚ್ಚು ಮಕ್ಕಳು ಆಗಮಿಸಿದ್ದವು. ಆದರೆ ಮುಂಜಾನೆ 10.30ರ ಸಮಯದಲ್ಲಿ ದಿಡೀರನೆ ಕಾಂಕ್ರೀಟ್ ಉದುರಿ ಬಿದ್ದಿದೆ. ಇದರಿಂದ ನಾಲ್ಕು ಮಕ್ಕಳ ತಲೆ ಮತ್ತು ಕಾಲುಗಳಿಗೆ ಗಾಯವಾಗಿವೆ.

Join Whatsapp
Exit mobile version