Home ಟಾಪ್ ಸುದ್ದಿಗಳು ಸಿಡಿಲು ಬಡಿದು ತಾಯಿ ಮಕ್ಕಳು ಸೇರಿ ನಾಲ್ವರು ಸಾವು

ಸಿಡಿಲು ಬಡಿದು ತಾಯಿ ಮಕ್ಕಳು ಸೇರಿ ನಾಲ್ವರು ಸಾವು

ಯಾದಗಿರಿ: ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಗುರುಮಠಕಲ್ ತಾಲೂಕಿನ ಎಸ್ ಹೊಸಹಳ್ಳಿ ಬಳಿ ನಡೆದಿದೆ.

ಗಾಜರಕೋಟ ಗ್ರಾಮದ ಮೋನಮ್ಮ (25) ಭಾನು (4) ಶ್ರೀನಿವಾಸ್ (2), ಎಸ್ ಹೊಸಹಳ್ಳಿ ಗ್ರಾಮ ಸಾಬಣ್ಣ (17) ಮೃತ ದುರ್ದೈವಿಗಳು.


ದುರ್ಘಟನೆಯಲ್ಲಿ ಓರ್ವ ಯುವಕನಿಗೆ ಗಾಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಸ್ಥಿತಿ ಗಂಭೀರವಾಗಿದೆ.


ಯಾದಗಿರಿಯಿಂದ ಇಂದು ಮಧ್ಯಾಹ್ನ ಊರಿಗೆ ಹೋಗುವಾಗ ಸುರಿದ ಮಳೆಯಿಂದಾಗಿ ಸಿಡಲು ಬಡಿದು ಸಾವನ್ನಪ್ಪಿದ್ದಾರೆ.
ಗುರುಮಠಕಲ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Join Whatsapp
Exit mobile version