ಉಡುಪಿಯಲ್ಲಿ ನಾಲ್ವರ ಕೊಲೆ ಪ್ರಕರಣ; ಕೌಟುಂಬಿಕ ಕಲಹ ಇಲ್ಲ: ಯಜಮಾನ ನೂರ್ ಮುಹಮ್ಮದ್ ಸ್ಪಷ್ಟನೆ

Prasthutha|

ಉಡುಪಿ: ನನ್ನ ಪತ್ನಿ ಮಕ್ಕಳ ಕೊಲೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರಗತಿಯಲ್ಲಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸುವ ಮೂಲಕ ನಮಗೆ ನ್ಯಾಯ ಒದಗಿಸಬೇಕು ಎಂದು ಮನೆಯ ಯಜಮಾನ ನೂರ್ ಮುಹಮ್ಮದ್ ಹೇಳಿದ್ದಾರೆ.

- Advertisement -


ನೇಜಾರು ಸಮೀಪದ ತೃಪ್ತಿ ಲೇಔಟ್ ನಲ್ಲಿರುವ ತನ್ನ ಮನೆಯಲ್ಲಿ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು,, ಪೊಲೀಸ್ ತನಿಖೆಗೆ ನಾನು ದಿನ 24ಗಂಟೆಗಳ ಕಾಲವೂ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧನಿದ್ದೇನೆ. ನನ್ನ ಮತ್ತು ಮಕ್ಕಳ ನಾಲ್ಕು ಮೊಬೈಲ್ ಗಳನ್ನು ಅವರಿಗೆ ಒಪ್ಪಿಸಿದ್ದೇನೆ. ನನ್ನ ಮತ್ತು ಮಗ ಮೊಬೈಲ್ಗಳನ್ನು ಪೊಲೀಸರು ನಿನ್ನೆ ಸಂಜೆ ವಾಪಾಸ್ಸು ಕೊಟ್ಟಿದ್ದಾರೆ. ಮೊಬೈಲ್ ನಲ್ಲಿ ಪೊಲೀಸರಿಗೆ ಕೆಲವು ಮಾಹಿತಿ ದೊರೆತಿದೆ ಎಂಬುದು ತಿಳಿದುಬಂದಿದೆ ಎಂದರು.

ಕೆಲವು ಮಾಧ್ಯಮಗಳಲ್ಲಿ ಈ ಕೊಲೆಗೆ ಕೌಟುಂಬಿಕ ಕಲಹ ಕಾರಣ ಎಂಬುದಾಗಿ ಸುದ್ದಿ ಬಂದಿದ್ದು, ಅದನ್ನು ಕೇಳಿ ನನಗೆ ಆಘಾತ ಆಗಿದೆ. ಅದರಲ್ಲಿ ಯಾವುದೇ ರೀತಿಯ ಸತ್ಯಾಂಶ ಇಲ್ಲ. ಎಲ್ಲವೂ ಸುಳ್ಳು ಎಂದು ನೂರ್ ಮುಹಮ್ಮದ್ ಸ್ಪಷ್ಟಪಡಿಸಿದರು.

Join Whatsapp