ಬಸ್‌ಗೆ ಕಾರು ಢಿಕ್ಕಿ: ಶಾಸಕರ ಅಳಿಯ ಸೇರಿ ನಾಲ್ವರು ಸಾವು

Prasthutha|

ವಿಜಯಪುರ: ಬಸ್ ಗೆ ಫಾರ್ಚುನರ್ ಕಾರು ಡಿಕ್ಕಿ ಹೊಡೆದು ಜಿಲ್ಲೆಯ ಶಾಸಕರೊಬ್ಬರ ಅಳಿಯ ಸೇರಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆವಿಜಯಪುರ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಸಂಭವಿಸಿದೆ.

- Advertisement -

ಜಿಲ್ಲೆಯ ನಾಗಠಾಣ ಶಾಸಕ ದೇವಾನಂದ ಚವ್ಹಾಣ ಅವರ ಅಕ್ಕನ‌ಮಗ ವಿಜಯ ದೊಡಮನಿ (45), ಆತನ ಸ್ನೇಹಿತರಾದ ಚಿದಾನಂದ ನಾಗೇಶ ಸೂರ್ಯವಂಶಿ (45), ಸೋಮನಾಥ ಕಾಳೆ (43) ಹಾಗೂ ಸಂದೀಪ ಪವಾರ (40) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಮೃತರು ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆ ನಾಂದೇಡ ಮೂಲದವರು. ವಿಜಯಪುರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp