Home ಟಾಪ್ ಸುದ್ದಿಗಳು ಒಂದೇ ಮನೆಯ ನಾಲ್ವರ ಬರ್ಬರ ಹತ್ಯೆ

ಒಂದೇ ಮನೆಯ ನಾಲ್ವರ ಬರ್ಬರ ಹತ್ಯೆ

ತಿರುಪ್ಪೂರ್: ಹಳೇ ದ್ವೇಷಕ್ಕೆ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ನಾಲ್ವರನ್ನು ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತಿರುಪ್ಪೂರ್ ಜಿಲ್ಲೆಯ ಪಲ್ಲಡಂನಲ್ಲಿ ನಡೆದಿದೆ.


ಅದೇ ಊರಿನ ಮೂವರು ವ್ಯಕ್ತಿಗಳು ಹಳೆಯ ದ್ವೇಷದ ಕಾರಣದಿಂದ ನಾಲ್ವರನ್ನು ಕೊಚ್ಚಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮೃತರನ್ನು ಸೆಂಥಿಲ್ ಕುಮಾರ್, ಅವರ ತಾಯಿ ಪುಷ್ಪಾವತಿ, ಸೋದರಸಂಬಂಧಿ ಮೋಹನ್ ಮತ್ತು ಇನ್ನೊಬ್ಬ ಸಂಬಂಧಿ ರತ್ನಾಂಬಳ್ ಎಂದು ಗುರುತಿಸಲಾಗಿದೆ. ಪಲ್ಲಡಂನ ಕಲ್ಲಕಿನಾರುನಲ್ಲಿರುವ ಸೆಂಥಿಲ್ ಕುಮಾರ್ ಅವರ ಅಂಗಡಿಯ ಸಮೀಪವಿರುವ ಮನೆಯ ಬಳಿ ಅವರೆಲ್ಲರ ಮೃತದೇಹಗಳು ಪತ್ತೆಯಾಗಿವೆ. ಆ ಶವಗಳ ಮೇಲೆ ಮಚ್ಚಿನಿಂದ ಕೊಚ್ಚಿದ ಹಲವಾರು ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಅಪರಾಧಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp
Exit mobile version