ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲು

Prasthutha|

ಬೀದರ್: ಕೆರೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ನೀರು ಪಾಲಾಗಿರುವ ಹೃದಯ ವಿದ್ರಾವಕ ಘಟನೆ ತಾಲೂಕಿನ ಕಂಗಟಿ ಗ್ರಾಮದಲ್ಲಿ ನಡೆದಿದೆ.
ಕಂಗಟಿ ಗ್ರಾಮದ ಸುನೀತಾ(32), ಪುತ್ರ ನಾಗಶೆಟ್ಟಿ(12), ತಾಯಿ ಆನಂದಾ(33), ಪುತ್ರ ಪ್ರಜ್ವಲ್‌(14) ಮೃತಪಟ್ಟವರು.

- Advertisement -

ಕಂಗಟಿ ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಜನವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಅದೇ ರೀತಿಯಾಗಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಸಹೋದರರು ದುರ್ಮರಣ ಹೊಂದಿರುವಂತಹ ಘಟನೆ ಬೀದರ್​ ತಾಲೂಕಿನ ಅಲಿಯಂಬರ್​ ಗ್ರಾಮದಲ್ಲಿ ನಡೆದಿದೆ.

ವಿನಯ್(20), ವೀರೇಶ್(17) ಮೃತ ಸಹೋದರರು. ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಕೊಲ್ಹಾರ ಪೊಲೀಸ್ ಠಾಣೆಯ ಪಿಎಸ್ಐ ಪ್ರೀತಮ್ ನಾಯಕ್ ಭೇಟಿ ನೀಡಿ ಪರಿಶೀಲಿಸಿದರು. ಜನವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Join Whatsapp