ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲು: ಇಬ್ಬರ ಶವ ಪತ್ತೆ

Prasthutha|

ಉತ್ತರಕನ್ನಡ: ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದ 87 ವಿದ್ಯಾರ್ಥಿಗಳ ಪೈಕಿ ನಾಲ್ವರು ನೀರುಪಾಲಾದ ಹೃದಯವಿದ್ರಾವಕ ಘಟನೆ ಕುಮಟಾ ತಾಲೂಕಿನ ಬಾಡ ಗ್ರಾಮದಲ್ಲಿ ಸಮುದ್ರತೀರದಲ್ಲಿ ನಡೆದಿದ್ದು, ಅವರಲ್ಲಿ ಇಬ್ಬರ ಶವ ಪತ್ತೆಯಾಗಿದೆ.
ಅರ್ಜುನ್, ಚೈತ್ರಶ್ರೀ, ತೇಜಸ್ ಡಿ., ಕಿರಣ್ ಕುಮಾರ್ ನೀರುಪಾಲಾದವರು ಎಂದು ತಿಳದು ಬಂದಿದೆ. ಅರ್ಜುನ್, ಚೈತ್ರಶ್ರೀ ಶವಗಳು ಮಾತ್ರ ದೊರಕಿದ್ದು, ಇನ್ನಿಬ್ಬರಿಗಾಗಿ ಶೋಧ ಮುಂದುವರೆದಿದೆ.

- Advertisement -

ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್ ಗೆ ಬಂದಿದ್ದ 87 ವಿದ್ಯಾರ್ಥಿಗಳು ಸಮುದ್ರಕ್ಕಿಳಿದು ಮೋಜು ಮಸ್ತಿ ಮಾಡುತ್ತಿದ್ದರು ಎನ್ನಗಿದ್ದು, ಈ ಪೈಕಿ ನಾಲ್ವರು ನೀರುಪಾಲಗಿದ್ದಾರೆ.
ಸ್ಥಳಕ್ಕೆ ಕುಮಟಾ ಪೊಲೀಸರು ಭೇಟಿ ನೀಡಿದ್ದು, ನಾಪತ್ತೆ ಆದವರಿಗೆ ಅಗ್ನಿಶಾಮಕ ದಳ ಪೊಲೀಸರು ಹಾಗೂ ಸ್ಥಳೀಯರಿಂದ ಶೋಧ ಕಾರ್ಯ ನಡೆಯುತ್ತಿದೆ.

Join Whatsapp