Home ಟಾಪ್ ಸುದ್ದಿಗಳು ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯ: ಕರ್ನಾಟಕದ ನಾಲ್ವರು ಚಾರಣಿಗರ ಸಾವು

ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯ: ಕರ್ನಾಟಕದ ನಾಲ್ವರು ಚಾರಣಿಗರ ಸಾವು

ಬೆಂಗಳೂರು: ಉತ್ತರಾಖಂಡದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ ನಾಲ್ವರು ಚಾರಣಿಗರು ಮೃತಪಟ್ಟಿದ್ದಾರೆ.


ಉತ್ತರಾಖಂಡದ ಸಹಸ್ತ್ರ ತಾಲ್ ನಲ್ಲಿ ಸಿಕ್ಕಿಬಿದ್ದಿರುವ 19 ಚಾರಣಿಗರ ಪೈಕಿ ನಾಲ್ವರು ಮೃತಪಟ್ಟಿದ್ದಾರೆ. ಉಳಿದವರಿಗಾಗಿ ರಕ್ಷಣೆ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಪಿಟಿಐಗೆ ತಿಳಿಸಿದ್ದಾರೆ.


ದುರಂತದಲ್ಲಿ ಮೃತಪಟ್ಟವರ ಗುರುತು ಇನ್ನಷ್ಟೇ ಪತ್ತೆಹಚ್ಚಬೇಕಿದೆ. ಚಾರಣವನ್ನು ಮೌಂಟೇನಿಯರಿಂಗ್ ಫೌಂಡೇಶನ್ ಆಯೋಜಿಸಿತ್ತು ಎಂದು ತಿಳಿದು ಬಂದಿದೆ.

Join Whatsapp
Exit mobile version