Home ಟಾಪ್ ಸುದ್ದಿಗಳು ಪಕ್ಷಕ್ಕೆ ಬರುವವರಿಗೆ ಮುಕ್ತ ಸ್ವಾಗತ: ಸಿಎಂ ಬೊಮ್ಮಾಯಿ

ಪಕ್ಷಕ್ಕೆ ಬರುವವರಿಗೆ ಮುಕ್ತ ಸ್ವಾಗತ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಪಕ್ಷಕ್ಕೆ ಬರುವವರಿಗೆ ಮುಕ್ತ ಸ್ವಾಗತ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಕುರಿತು ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ತತ್ವ, ಸಿದ್ಧಾಂತವನ್ನು ಒಪ್ಪಿ ಯಾವುದೇ ಪಕ್ಷದಿಂದ ನಮ್ಮ ಪಕ್ಷಕ್ಕೆ ಆಗಮಿಸಿದರೂ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕೆಲಸ ನಡೆಯುತ್ತಿದೆ. ಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಜನ ಬಿಜೆಪಿ ಸೇರಲಿದ್ದಾರೆ. ಬೇರೆ ಪಕ್ಷಗಳಿಂದ ಬರುವ ಮುಖಂಡರ ಪೈಕಿ ಯಾರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎಂಬುದನ್ನು ಪಕ್ಷದ ಆಯಾ ಜಿಲ್ಲಾ ಮತ್ತು ರಾಜ್ಯ ಘಟಕ ನೋಡಿಕೊಳ್ಳುತ್ತದೆ. ಬಿಜೆಪಿ ಪಕ್ಷಕ್ಕೆ ವಿವಿಧ ಜಿಲ್ಲೆಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಬೇರೆ ಪಕ್ಷಗಳ ಮುಖಂಡರು ಆಗಮಿಸುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Join Whatsapp
Exit mobile version