ನಟ ದರ್ಶನ್​ ಗೆ ವಂಚನೆ ಪ್ರಯತ್ನ | ನಕಲಿ ಬ್ಯಾಂಕ್​ ಸಿಬ್ಬಂದಿ ಅರೆಸ್ಟ್​

Prasthutha|

ಬೆಂಗಳೂರು : ನಕಲಿ ಬ್ಯಾಂಕ್​ ಸಿಬ್ಬಂದಿ ಹೇಳಿ ನಟ ದರ್ಶನ್ ಗೆ ವಂಚನೆ ಪ್ರಯತ್ನ ನಡೆದಿದೆ.    ಅರುಣಾ ಎನ್ನುವವರು ದರ್ಶನ್​ ಬಳಿ ತೆರಳಿದ್ದರು. ನಿಮ್ಮ​ ಹೆಸರಿನಲ್ಲಿ ಲೋನ್​ಗೆ ಸ್ನೇಹಿತರು ಅರ್ಜಿ ಹಾಕಿದ್ದಾರೆ ಎಂದು ಮಹಿಳೆ ಹೇಳಿದ್ದರು. ನಾನು ಬ್ಯಾಂಕ್ ಮ್ಯಾನೇಜರ್ ಎಂದೇ ಆಕೆ ಪರಿಚಯಿಸಿಕೊಂಡಿದ್ದರು. ‘ನಿಮ್ಮ ಸ್ನೇಹಿತರಿಂದ ನಿಮ್ಮ ಶ್ಯೂರಿಟಿಯಲ್ಲಿ ಸಾಲಕ್ಕೆ ಅರ್ಜಿ ಹಾಕಿದ್ದಾರೆ. ₹25 ಕೋಟಿ ಲೋನ್‌ಗೆ ಬೇಡಿಕೆ ಇಟ್ಟಿದ್ದಾರೆ’ ಎಂದು ಅರುಣಾ ಹೆಳಿದ್ದರು. ಈ ಬಗ್ಗೆ ಪರಿಶೀಲಿಸಿದಾಗ ಲೋನ್‌ ಗೆ ಯಾರು ಅರ್ಜಿ ಸಲ್ಲಿಸಿಲ್ಲ ಎಂಬುದು ಗೊತ್ತಾಗಿದೆ.

- Advertisement -

ಎರಡು ದಿನದ ಹಿಂದೆ ನಟ ದರ್ಶನ್ ಸ್ನೇಹಿತರು ಈ ಬಗ್ಗೆ ಮೈಸೂರಿನ ಹೆಬ್ಬಾಳ ಠಾಣೆಗೆ ದೂರು ನೀಡಿದ್ದಾರೆ. ನಟ ದರ್ಶನ್​ ಸ್ನೇಹಿತರ ದೂರನ್ನು ಆಧರಿಸಿ ಮಹಿಳೆ ವಶಕ್ಕೆ ಪಡೆಯಲಾಗಿದೆ. ಸದ್ಯ ಮೈಸೂರಿನ ಎನ್​ಆರ್​​ ಎಸಿಪಿ ಕಚೇರಿಗೆ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡರನ್ನು ಪೊಲೀಸರು ಕರೆಸಿದ್ದಾರೆ. ಸದ್ಯ, ಇಬ್ಬರಿಂದ ಹೇಳಿಕೆ ಪಡೆಯಲಾಗುತ್ತಿದೆ.

Join Whatsapp