ದುರಹಂಕಾರದಿಂದ ಕಾಂಗ್ರೆಸ್ ಅವನತಿಯತ್ತ: ಗುಲಾಂ ನಬಿ ಆಝಾದ್

Prasthutha|

ಪೂಂಚ್:-ದೌರ್ಬಲ್ಯ ಹಾಗೂ ದುರಹಂಕಾರದಿಂದಾಗಿ ಕಾಂಗ್ರೆಸ್ ಪಕ್ಷ ಅವನತಿಯತ್ತ ಸಾಗುತ್ತಿದೆ ಎಂದು ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಝಾದ್ ಪಾರ್ಟಿ ಅಧ್ಯಕ್ಷ ಗುಲಾಂ ನಬಿ ಆಝಾದ್ ಹೇಳಿದ್ದಾರೆ.

- Advertisement -

ಕಾಂಗ್ರೆಸ್‍ನೊಳಗಿನ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ನಡುವೆ, ಮಹಾರಾಷ್ಟ್ರದ ಮಾಜಿ ಸಿಎಂ ಅಶೋಕ್ ಚವಾಣ್ ಅವರು ಪಕ್ಷದಿಂದ ನಿರ್ಗಮಿಸಿರುವುದು ಕಾಂಗ್ರೆಸ್‍ಗೆ ದೊಡ್ಡ ಹೊಡೆತವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮಾಜಿ ನಾಯಕರಾಗಿದ್ದ ಆಝಾದ್ ಹೇಳಿದ್ದಾರೆ.

ಈಗ ನಾನು ಈ ಬಗ್ಗೆ ಹೆಚ್ಚು ಹೇಳಲು ಬಯಸುವುದಿಲ್ಲ. ನಾನು ಪಕ್ಷವನ್ನು ತೊರೆದಿದ್ದೇನೆ. ಅಬ್ ವೋ ಜಾನೇ ಉಂಕ ಕಾಮ್ ಜಾನೆ. ಅಶೋಕ್ ಚವ್ಹಾಣ್ ಕಾಂಗ್ರೆಸ್ ಗೆ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ತಂದೆ ಕೂಡ ಕಾಂಗ್ರೆಸ್ ನ ದೊಡ್ಡ ನಾಯಕರಾಗಿದ್ದು, ಕೇಂದ್ರ ಸಚಿವರೂ ಆಗಿದ್ದರು. ಮುಂಬರುವ ದಿನಗಳಲ್ಲಿ ಇನ್ನಷ್ಟು ಮಂದಿ ಪಕ್ಷ ತೊರೆಯಲಿದ್ದಾರೆ ಎಂದು ನನ್ನ ಬಳಿ ಇರುವ ಮಾಹಿತಿ ಇದೆ ಎಂದು ಅವರು ಹೇಳಿದರು.

Join Whatsapp