ಗದಗ: ಸಿಡಿಲು ಬಡಿದು ಬಾಲಕ ಮೃತ

Prasthutha|

ಗದಗ: ನರಗುಂದ ತಾಲೂಕಿನಾದ್ಯಂತ ಇಂದು ಗುಡುಗು ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ಬಾಲಕ ಮೃತಪಟ್ಟಿದ್ದಾರೆ. ಇನ್ನೋರ್ವ ಬಾಲಕ ಗಾಯಗೊಂಡಿರುವ ಘಟನೆ ನರಗುಂದ ತಾಲೂಕಿನ ಬಂಡೆಮ್ಮ ನಗರ ಗ್ರಾಮದ ಬಳಿ ನಡೆದಿದೆ.

- Advertisement -

ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಗೊಂಡಿದ್ದು, ಆತನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಲ್ಲಪ್ಪ ಮತ್ತು ಪರಸಪ್ಪ ಮಳೆ ಬರುವ ಸಮಯದಲ್ಲಿ ಕುರಿ ಮೇಯಿಸಲು ಹೋಗಿದ್ದರು ಎನ್ನಲಾಗಿದೆ ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಮರದ ಬಳಿ ಹೋಗಿ ನಿಂತಿದ್ದಾರೆ ಈ ವೇಳೆ ಸಿಡಿಲು ಬಡಿದಿದೆ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಇನ್ನೋರ್ವ ಗಾಯಗೊಂಡಿದ್ದಾನೆ.

- Advertisement -

ಮೃತರು ನರಗುಂದ ಪಟ್ಟಣದ ಗುಡ್ಡದಕೇರಿ ಬಡಾವಣೆಯ ನಿವಾಸಿಗಳು ಎಂದು ಹೇಳಲಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



Join Whatsapp