Home ಟಾಪ್ ಸುದ್ದಿಗಳು ಗದಗ: ಸಿಡಿಲು ಬಡಿದು ಬಾಲಕ ಮೃತ

ಗದಗ: ಸಿಡಿಲು ಬಡಿದು ಬಾಲಕ ಮೃತ

ಗದಗ: ನರಗುಂದ ತಾಲೂಕಿನಾದ್ಯಂತ ಇಂದು ಗುಡುಗು ಸಿಡಿಲು, ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಸಿಡಿಲು ಬಡಿದು ಓರ್ವ ಬಾಲಕ ಮೃತಪಟ್ಟಿದ್ದಾರೆ. ಇನ್ನೋರ್ವ ಬಾಲಕ ಗಾಯಗೊಂಡಿರುವ ಘಟನೆ ನರಗುಂದ ತಾಲೂಕಿನ ಬಂಡೆಮ್ಮ ನಗರ ಗ್ರಾಮದ ಬಳಿ ನಡೆದಿದೆ.

ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಗೊಂಡಿದ್ದು, ಆತನನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯಲ್ಲಪ್ಪ ಮತ್ತು ಪರಸಪ್ಪ ಮಳೆ ಬರುವ ಸಮಯದಲ್ಲಿ ಕುರಿ ಮೇಯಿಸಲು ಹೋಗಿದ್ದರು ಎನ್ನಲಾಗಿದೆ ಈ ವೇಳೆ ಮಳೆಯಿಂದ ರಕ್ಷಣೆ ಪಡೆಯಲು ಮರದ ಬಳಿ ಹೋಗಿ ನಿಂತಿದ್ದಾರೆ ಈ ವೇಳೆ ಸಿಡಿಲು ಬಡಿದಿದೆ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟರೆ ಇನ್ನೋರ್ವ ಗಾಯಗೊಂಡಿದ್ದಾನೆ.

ಮೃತರು ನರಗುಂದ ಪಟ್ಟಣದ ಗುಡ್ಡದಕೇರಿ ಬಡಾವಣೆಯ ನಿವಾಸಿಗಳು ಎಂದು ಹೇಳಲಾಗಿದೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp
Exit mobile version