ಬಿಜೆಪಿಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರನ್ನಾಗಿ ಗಜೇಂದ್ರ ಶೇಖಾವತ್ ನೇಮಕ

Prasthutha|

ನವದೆಹಲಿ: ಈ ವರ್ಷ ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಚುನಾವಣಾ ನಿರ್ವಹಣಾ ಸಮಿತಿಯ ಸಂಚಾಲಕರನ್ನಾಗಿ ಭಾರತೀಯ ಜನತಾ ಪಕ್ಷ  ಶುಕ್ರವಾರ ಘೋಷಿಸಿದೆ.

- Advertisement -

ಬಿಜೆಪಿಯ ಚುನಾವಣಾ ನಿರ್ವಹಣಾ ತಂಡದ ಇಬ್ಬರು ಸಹ ಸಂಚಾಲಕರಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ವಿನೋದ್ ತಾವ್ಡೆ ಮತ್ತು ಸಿ.ಟಿ.ರವಿ ಆಯ್ಕೆಯಾಗಿದ್ದಾರೆ.

ಈ ತಂಡದಲ್ಲಿ ಕೇಂದ್ರ ಸಚಿವರಾದ ಜಿ.ಕಿಶನ್ ರೆಡ್ಡಿ, ಅಶ್ವಿನಿ ವೈಷ್ಣವ್ ಮತ್ತು ಸರ್ಬಾನಂದ ಸೋನೊವಾಲ್, ಸಂಸದೀಯ ವ್ಯವಹಾರಗಳ ಸಚಿವ ಅರ್ಜುನ್ ರಾಮ್ ಮೇಘವಾಲ್ ಮತ್ತು ಭಾರತಿ ಪವಾರ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್, ರಾಷ್ಟ್ರೀಯ ಉಪಾಧ್ಯಕ್ಷ ಡಿ.ಕೆ.ಅರುಣಾ ಮತ್ತು ರಾಷ್ಟ್ರೀಯ ಕಾರ್ಯದರ್ಶಿ ರಿತುರಾಜ್ ಸಿನ್ಹಾ ಇದ್ದಾರೆ.

Join Whatsapp