ಕಾಂಗ್ರೆಸ್ ಸೋಲಿಗೆ ಗಾಂಧಿ ಪರಿವಾರ ಹೊಣೆಯಲ್ಲ: ಮಲ್ಲಿಕಾರ್ಜುನ ಖರ್ಗೆ

Prasthutha|

ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇವಲ ಗಾಂಧಿ ಪರಿವಾರವನ್ನು ಮಾತ್ರ ಸೋಲಿಗೆ ಹೊಣೆ ಮಾಡಬಾರದು ಎಂದು ಹೇಳಿದ್ದಾರೆ. ಪಂಚರಾಜ್ಯದ ಸೋಲಿನ ಹೊಣೆಗಾರಿಕೆಯನ್ನು ನಾವೆಲ್ಲರೂ ಹೊರುತ್ತೇವೆ, ಗಾಂಧಿ ಪರಿವಾದೊಂದಿಗೆ ನಾವು ನಿಲ್ಲುತ್ತೇವೆ ಎಂದಿದ್ದಾರೆ.

- Advertisement -

ಆದಿತ್ಯವಾರ ಕಾಂಗ್ರೆಸ್ ಏರ್ಪಡಿಸಿದ್ದ ಸಿಡಬ್ಲೂಸಿ ಸಭೆಯ ಬಳಿಕ ಮಾತನಾಡಿದ ಖರ್ಗೆ, ಪಂಚರಾಜ್ಯದ ಕಾಂಗ್ರೆಸ್ ನಾಯಕರು ಹಾಗೂ ಕಾಂಗ್ರೆಸ್ ಸಂಸದರು ಈ ಸೋಲಿಗೆ ಸಮಾನ ಹೊಣೆಗಾರರು ಎಂದರು. ಈ ಸೋಲಿಗೆ ಗಾಂಧಿ ಪರಿವಾರವನ್ನು ಹೊಣೆಯಾಗಿಸುವುದು ಸರಿಯಲ್ಲ, ಅಲ್ಲದೇ ನಾವು ಸೋನಿಯಾ ಗಾಂಧಿ ಅವರ ಮೇಲೆ ನಂಬಿಕೆ ಇಟ್ಟಿದ್ದೇವೆ. ಇದೇ ನಂಬಿಕೆಯೊಂದಿಗೆ ಮುನ್ನಡೆಯುತ್ತೇವೆ. ಅವರು ರಾಜೀನಾಮೆ ನೀಡುವ ಅಗತ್ಯವೇ ಇಲ್ಲ ಎಂದು ಹೇಳಿದ್ದಾರೆ.

ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗಿಯಾಗಿದ್ದ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪಕ್ಷದ ಸೋಲಿಗೆ ನಾನು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಕಾರಣ ಎಂದು ಕಾಂಗ್ರೆಸ್ ನಾಯಕರು ಭಾವಿಸುವುದಾದರೆ ನಾವು ರಾಜೀನಾಮೆ ನೀಡಲು ಸಿದ್ದ ಎಂದು ಹೇಳಿದ್ದರು. ಆದರೆ ಸೋನಿಯಾ ಗಾಂಧಿಯ ಪ್ರಸ್ತಾಪವನ್ನು ಸಿಡಬ್ಲ್ಯೂಸಿ ಸಭೆಯಲ್ಲಿ ಭಾಗಿಯಾಗಿದ್ದ ಎಲ್ಲ ನಾಯಕರು ಸರ್ವಾನುಮತದಿಂದ ತಿರಸ್ಕರಿಸಿ, ಅಧ್ಯಕ್ಷೆಯಾಗಿ ಮುಂದುವರಿಯಲು ಕೋರಿಕೊಂಡಿದ್ದಾರೆ.

Join Whatsapp