ಗಾಂಧಿ ಶಾಂತಿ ಪ್ರಶಸ್ತಿಗೆ ಬಾಂಗ್ಲಾದೇಶದ ರಾಷ್ಟ್ರಪಿತ ಮತ್ತು ಒಮಾನ್ ಆಡಳಿತಗಾರ ಆಯ್ಕೆ

Prasthutha|

ಹೊಸದಿಲ್ಲಿ: ಕೇಂದ್ರ ಸರ್ಕಾರ 2019 ಮತ್ತು 2020 ರ ಗಾಂಧಿ ಶಾಂತಿ ಪ್ರಶಸ್ತಿ ವಿಜೇತರನ್ನು ಘೋಷಿಸಿದೆ. ಬಾಂಗ್ಲಾದೇಶದ ರಾಷ್ಟ್ರಪಿತ ಶೈಖ್ ಮುಜಿಬುರ್ ರಹಮಾನ್ ಅವರು 2020 ರ ಗಾಂಧಿ ಶಾಂತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. 2019 ರ ಪ್ರಶಸ್ತಿ ಒಮಾನ್‌ನ ಆಡಳಿತಗಾರ ದಿವಂಗತ ಸುಲ್ತಾನ್ ಕಬೂಸ್ ಬಿನ್ ಸಯೀದ್ ಅಲ್ ಸಯೀದ್ ಅವರಿಗೆ ಸಲ್ಲುತ್ತದೆ.

- Advertisement -

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ತೀರ್ಪುಗಾರರು ಈ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಪ್ರಶಸ್ತಿಯು 1 ಕೋಟಿ ರೂ. ನಗದು ಬಹುಮಾನ ಮತ್ತು ಫಲಕವನ್ನು ಹೊಂದಿದೆ. ಮಾನವ ಹಕ್ಕುಗಳು ಮತ್ತು ಸ್ವಾತಂತ್ರ್ಯದ ವಕ್ತಾರರಾಗಿದ್ದ ಶೇಖ್ ಮುಜಿಬುರ್ ರಹಮಾನ್ ಮತ್ತು ಸುಲ್ತಾನ್ ಕಬೂಸ್ ಬಿನ್ ಸಯೀದ್ ಅಲ್ ಸಯೀದ್ ಅವರು ಶಾಂತಿಯ ಸಂದೇಶವಾಹಕರಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

Join Whatsapp