ಗಾಂಧೀಜಿ ಭಾವಚಿತ್ರಕ್ಕೆ ಅಶ್ಲೀಲ ಚಿತ್ರ ಜೋಡಿಸಿದ ಉಪ್ಪಿನಂಗಡಿ ಯುವಕ| ದೂರು ದಾಖಲು

Prasthutha|

ಉಪ್ಪಿನಂಗಡಿ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಅಶ್ಲೀಲ ಚಿತ್ರ ಜೋಡಣೆ ಮಾಡಿ ಅಸಭ್ಯ ಪದಗಳನ್ನು ಬಳಸಿ ಅವರನ್ನು ಕೆಟ್ಟದಾಗಿ ಬಿಂಬಿಸಿ ಸಾಮಾಜಿಕ ಜಾಲತಾಣವಾದ ವಾಟ್ಸ್‌ ಆ್ಯಪ್‌ನಲ್ಲಿ ಪೋಸ್ಟ್ ಹಾಕಿರುವ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಉಪ್ಪಿನಂಗಡಿ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

- Advertisement -

ಆರೋಪಿ ವಿಘ್ನೇಶ್ ಬಿಳಿಯೂರು ಎಂಬಾತ ಶಾಂತಿ ಕದಡುವ ಉದ್ದೇಶದಿಂದ ರಾಷ್ಟ್ರಪಿತ ಗಾಂಧೀಜಿಯವರನ್ನು ಅವಹೇಳನಕಾರಿಯಾಗಿ ನಿಂದಿಸಿ ವಾಟ್ಸ್ ಆ್ಯಪ್ ನಲ್ಲಿ ಸಂದೇಶ ಹರಡಿದ್ದಾನೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ಆರೋಪಿಯನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ

Join Whatsapp