Home ಕರಾವಳಿ ನೆಲ್ಯಾಡಿ ಉದನೆ ಗಣಪತಿ ಕಟ್ಟೆ ಧ್ವಂಸ ಪ್ರಕರಣ : ಕಿಡಿಗೇಡಿ ರವೀಂದ್ರ ಕುಮಾರ್ ಬಂಧನ

ನೆಲ್ಯಾಡಿ ಉದನೆ ಗಣಪತಿ ಕಟ್ಟೆ ಧ್ವಂಸ ಪ್ರಕರಣ : ಕಿಡಿಗೇಡಿ ರವೀಂದ್ರ ಕುಮಾರ್ ಬಂಧನ

ಉಪ್ಪಿನಂಗಡಿ: ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ಗಣಪತಿ ಕಟ್ಟೆಯ ಮೇಲೆ ಕಲ್ಲು ಎತ್ತಿ ಹಾಕಿ ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬಿಹಾರ ಮೂಲದ ರವೀಂದ್ರ ಕುಮಾರ್ (25) ಎಂದು ತಿಳಿದು ಬಂದಿದೆ.

ಉದನೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ಶುಕ್ರವಾರ ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಿತ್ತು. ಈ ಹಿನ್ನೆಲೆಯಲ್ಲಿ ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಶೃಂಗರಿಸಲಾಗಿತ್ತು. ಆದರೆ ರಾತ್ರಿ ವೇಳೆ ಬಾಳೆಗಿಡಗಳನ್ನು ಕಿತ್ತೆಸೆದು ಕಲ್ಲುಗಳನ್ನು ಎತ್ತಿಹಾಕಿ ಕಟ್ಟೆಯ ಮೆಟ್ಟಿಲುಗಳನ್ನು ಧ್ವಂಸ ಮಾಡಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಸ್ಥಳದಲ್ಲಿ ಕೆಲಕಾಲ ಉದಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಸ್ಥಳೀಯ ನಿವಾಸಿಗಳನ್ನು ಧೃತಿಗೆಡಿಸಿತ್ತು. ಈ ನಿಟ್ಟಿನಲ್ಲಿ ತಕ್ಷಣ ಕಾರ್ಯಪ್ರವೃತ್ತರಾದ ಉಪ್ಪಿನಂಗಡಿ ಪೊಲೀಸರು, ಘಟನೆ 24 ಗಂಟೆಯೊಳಗೆ ನೈಜ್ಯ ಆರೋಪಿಯನ್ನು ಬಂಧಿಸುವ ಮೂಲಕ ಸಂಭಾವ್ಯ ಅನಾಹುತವನ್ನು ತಪ್ಪಿಸಿದ್ದಾರೆ.

Join Whatsapp
Exit mobile version