ಅಂಬೇಡ್ಕರ್ ಮಾದರಿಯಲ್ಲಿ ಗಣೇಶ ಮೂರ್ತಿ: ದೂರು ದಾಖಲು

Prasthutha|

ಗಂಗಾವತಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಹೋಲುವ ರೀತಿಯಲ್ಲಿ ಗಣೇಶ ಮೂರ್ತಿಯನ್ನು ನಿರ್ಮಿಸಿ ಅದನ್ನು ಪ್ರತಿಷ್ಠಾಪಿಸುವ ಮೂಲಕ ಅಂಬೇಡ್ಕರ್ ಅವರಿಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಗಂಗಾವತಿಯ ಅಂಬೇಡ್ಕರ್ ನಗರದಲ್ಲಿ ವಿನಾಯಕ ಸ್ನೇಹವೃಂದ ಯುವಕ ಮಂಡಳಿಯವರು ಅಂಬೇಡ್ಕರ್ ಮಾದರಿಯಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದಾರೆ.

ಗಣೇಶ ಮೂರ್ತಿ ಕಾಲಿನಿಂದ ಕುತ್ತಿಗೆಯ ತನಕ ಅಂಬೇಡ್ಕರ್ ರೂಪ ಇದ್ದರೆ ತಲೆ ಮಾತ್ರ ಗಣೇಶನದ್ದಾಗಿದೆ. ಯುವಕ ಮಂಡಳಿ ಸದಸ್ಯರು ಗಲಭೆ ಸೃಷ್ಟಿಸುವ ಉದ್ದೇಶದಿಂದಲೇ ಈ ರೀತಿಯ ಮೂರ್ತಿ ಪ್ರತಿಷ್ಠಾಪಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

- Advertisement -

ಪೊಲೀಸರು ಕೂಡಲೇ ಗಣೇಶ ಯುವಕ ಮಂಡಳಿ ಸದಸ್ಯರನ್ನು ಬಂಧಿಸಬೇಕು ಎಂದು ದೂರಿನಲ್ಲಿ ಒತ್ತಾಯಿಸಲಾಗಿದೆ.

Join Whatsapp