Home ಟಾಪ್ ಸುದ್ದಿಗಳು ವಿರೋಧಗಳ ನಡುವೆಯೂ ಮಂಗಳೂರು ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ವಿರೋಧಗಳ ನಡುವೆಯೂ ಮಂಗಳೂರು ವಿವಿಯ ಮಂಗಳಾ ಆಡಿಟೋರಿಯಂನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ಮಂಗಳೂರು: ವ್ಯಾಪಕ ವಿರೋಧಗಳ ನಡುವೆಯೂ ಕೊನೆಗೂ ಮಂಗಳೂರು ವಿಶ್ವವಿದ್ಯಾಲಯದ ಮಂಗಳಾ ಆಡಿಟೋರಿಯಂನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.

ವಿಶ್ವವಿದ್ಯಾಲಯದ ಸುತ್ತಮುತ್ತ ಹಾಗೂ ಮಂಗಳಾ ಆಡಿಟೋರಿಯಂ ಒಳಭಾಗದಲ್ಲಿ ಡಿಸಿಪಿ ಸಿದ್ದಾರ್ಥ್ ಗೋಯಲ್ ನೇತೃತ್ವದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕೆಎಸ್ಆರ್​​ಪಿ ಸೇರಿದಂತೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ವಿವಿಯ ಮಂಗಳಾ ಆಡಿಟೋರಿಯಂನಲ್ಲೇ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದಕ್ಕೆ ಭಾರೀ ವಿರೋಧಗಳು ವ್ಯಕ್ತವಾಗಿತ್ತು.

ಸಮಾನ ಮನಸ್ಕರ ನಿಯೋಗ, ಕಾಂಗ್ರೆಸ್ ಮುಖಂಡರು, ಎನ್ಎಸ್ ಯುಐ, ಡಿವೈಎಫ್ಐ ಹಾಗೂ ಮಾಜಿ ಸಿಂಡಿಕೇಟ್ ಸದಸ್ಯರು ವಿಶ್ವವಿದ್ಯಾಲಯದ ಉಪಕುಲಪತಿ ಜಯರಾಜ್ ಅಮೀನ್ ಅವರನ್ನು ಭೇಟಿಯಾಗಿ ವಿಶ್ವವಿದ್ಯಾಲಯದಕ್ಕೆ ಅದರದ್ದೇ ಆದ ಗೌರವ ಹಾಗೂ ನಿಯಮ ಇದೆ. ಇಲ್ಲಿ ಧಾರ್ಮಿಕ ಆಚರಣೆ ಸರಿಯಲ್ಲ. ಈ ಹಿಂದೆ ವಿಶ್ವವಿದ್ಯಾಲಯದ ಹಾಸ್ಟೆಲ್​ನಲ್ಲಿ ಗಣೇಶೋತ್ಸವ ಆಚರಣೆ ಆಗುತ್ತಿತ್ತು. ಆದರೆ ಈಗ ಮಂಗಳ ಆಡಿಟೋರಿಯಂನಲ್ಲೇ ಆಗಬೇಕು ಅನ್ನೋದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದ್ದರು.

Join Whatsapp
Exit mobile version