ಸೌರವ್ ಗಂಗೂಲಿಗೆ ಮತ್ತೆ ಎದೆನೋವು | ಆಸ್ಪತ್ರೆಗೆ ದಾಖಲು

Prasthutha|

ಕೊಲ್ಕತಾ : ಮಾಜಿ ಕ್ರಿಕೆಟಿಗ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತೆ ಕೊಲ್ಕತಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಬೆಳಗ್ಗೆ ಎದೆ ನೋವು ಕಾಣಿಸಿಕೊಂಡಿದುದರಿಂದ ಅವರು ಆಸ್ಪತ್ರೆಗೆ ದಾಖಲಾದರು ಎಂದು ವರದಿಗಳು ತಿಳಿಸಿವೆ.

- Advertisement -

ಇತ್ತೀಚೆಗೆ ಲಘು ಹೃದಯಾಘಾತಕ್ಕೆ ಗುರಿಯಾಗಿದ್ದ ಗಂಗೂಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಗಂಗೂಲಿ ಅವರಿಗೆ ಎದೆ ನೋವು ಕಾಣಿಸಿಕೊಂಡಿದುದರಿಂದ ಅವರನ್ನು ಕೊಲ್ಕತಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿರುವುದಾಗಿ ವರದಿಗಳು ತಿಳಿಸಿವೆ.  

Join Whatsapp