ಹಗಲು ವೇಳೆಯಲ್ಲಿ ಮಾತ್ರ ಅನಿಲ ಟ್ಯಾಂಕರ್ ಸಂಚರಿಸಬೇಕು: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ

Prasthutha|

ಮಂಗಳೂರು: ಅನಿಲ ಟ್ಯಾಂಕರ್ ಗಳು ನಿಗದಿಪಡಿಸಿದ ವೇಳೆಯಲ್ಲಿ ಮಾತ್ರ ಸಂಚರಿಸಲು ಅಧಿಕಾರಿಗಳು ನಿಗಾವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಿದ್ದಾರೆ.

- Advertisement -

ಜಿಲ್ಲಾ ಬಿಕ್ಕಟ್ಟು ಪರಿಹಾರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹಗಲು ವೇಳೆಯಲ್ಲಿ ಮಾತ್ರ ಅನಿಲ ಟ್ಯಾಂಕರ್ ಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು, ಅದನ್ನು ಉಲ್ಲಂಘಿಸಿದ್ದಲ್ಲಿ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ನಿರ್ದೇಶಿಸಿದರು.

ಟ್ಯಾಂಕರ್ ಗಳಿಗೆ ಕಡ್ಡಾಯವಾಗಿ ಇಬ್ಬರು ಚಾಲಕರಿರಬೇಕು, ರಾತ್ರಿ ವೇಳೆ ಸಂಚಾರಕ್ಕೆ ಅವಕಾಶ ಮಾಡಿಕೊಡಬಾರದು, ಒಂದು ವೇಳೆ ರಾತ್ರಿ ವೇಳೆ ಸಂಚರಿಸಬೇಕಾದಲ್ಲಿ ಜಿಪಿಎಸ್ ಅನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.



Join Whatsapp