ಮರದ ಕೊಂಬೆ ಬಿದ್ದು ಗಾಯಗೊಂಡ ಬಾಲಕಿ 702 ದಿನಗಳ ಚಿಕಿತ್ಸೆ ಫಲಿಸದೇ ಸಾವು

Prasthutha|

ಬೆಂಗಳೂರು: ಶಾಲೆಗೆ ಹೋಗುವಾಗ ಮರದ ಕೊಂಬೆ ಮುರಿದು ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ತ್ರಿಷಾ (9) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

- Advertisement -

ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಸುಮಾರು 702 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತ್ರಿಷಾ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾರೆ.

 ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. 702 ದಿನಗಳ ಸತತ ಚಿಕಿತ್ಸೆಯ ನಂತರವೂ ತ್ರಿಷಾಳನ್ನು ಉಳಿಸಿಕೊಳ್ಳಲಾಗಿಲ್ಲ.

- Advertisement -

ಕಳೆದ 2020ರ ಮಾರ್ಚ್ 11ರಂದು ರಾಮಮೂರ್ತಿನಗರದ ಕೌದೇನಹಳ್ಳಿ ಬಳಿ ಒಣಗಿದ ರೆಂಬೆ ಬಿದ್ದು ಬಾಲಕಿ ತ್ರಿಷಾ ತೀವ್ರವಾಗಿ ಗಾಯಗೊಂಡಿದ್ದರು. ಆ ವೇಳೆ ಬಾಲಕಿಯ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಬಿಬಿಎಂಪಿ ಒಪ್ಪಿಕೊಂಡಿತ್ತು. ಅಲ್ಲದೆ ಸ್ಥಳೀಯ ಕಾರ್ಪೋರೇಟರ್ ಪದ್ಮಾವತಿ ಶ್ರೀನಿವಾಸ್ ಅವರು ಬಾಲಕಿಯ ಕುಟುಂಬಕ್ಕೆ 1 ಲಕ್ಷ ರೂ ಪರಿಹಾರ ನೀಡಿದ್ದರು.

ಗಾಯಗೊಂಡಿದ್ದ ತ್ರಿಷಾಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಅಂದಿನಿಂದ ಇಂದಿನವರೆಗೂ ಆಸ್ಪತ್ರೆಯಲ್ಲೇ ಸುಮಾರು 702 ದಿನಗಳ ಸತತ ಚಿಕಿತ್ಸೆಯ ನಂತರವೂ ತ್ರಿಷಾ ಬದುಕುಳಿಯಲಿಲ್ಲ. ಬದುಕಿನ  ಯುದ್ಧದಲ್ಲಿ ಹೋರಾಡುತ್ತಲೇ ಪ್ರಾಣ ಬಿಟ್ಟಿದ್ದಾಳೆ.

Join Whatsapp