ಶಾಲೆಯಲ್ಲಿ ವಿದ್ಯುತ್ ತಂತಿ ಸ್ಪರ್ಶಗೊಂಡು ವಿದ್ಯಾರ್ಥಿನಿ ಸಾವು: ಸ್ಥಳೀಯರಿಂದ ಪ್ರತಿಭಟನೆ

Prasthutha|

ಚಿಕ್ಕೋಡಿ: ಶಾಲೆಯ ಆವರಣದ ವಿದ್ಯುತ್ ಕಂಬದಿಂದ ಆಕಸ್ಮಿಕವಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಒಂಬತ್ತರ ಹರೆಯದ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಡೋಣೆವಾಡಿಯಿಂದ ವರದಿಯಾಗಿದೆ.

- Advertisement -

ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಡೋಣೆವಾಡಿ ಎಂಬಲ್ಲಿನ ಸರ್ಕಾರಿ ಮರಾಠಿ ಶಾಲೆಯ ವಿದ್ಯಾರ್ಥಿನಿ ಅನುಷ್ಕಾ ಸದಾಶಿವ ಮೃತಪಟ್ಟ ಬಾಲಕಿ.

ಶಾಲೆಯ ಮುಖ್ಯ ಶಿಕ್ಷಕನ ನಿರ್ಲಕ್ಷ್ಯವೇ ಘಟನೆಗೆ ನೇರ ಕಾರಣ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು, ಮುಖ್ಯಶಿಕ್ಷಕ ಕುಮಾರ್ ನಾಟೇಕರ್ ಅವರನ್ನು ಅಮಾನತುಗೊಳಿಸಿ ಚಿಕ್ಕೋಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

- Advertisement -

ಘಟನೆ ಸಂಬಂಧ ಶಾಲಾ ಆಡಳಿತ ಮಂಡಳಿ ಮತ್ತು ನಿಪ್ಪಾಣಿ ಬಿಇಒ ಅವರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದು, ಮುಖ್ಯಶಿಕ್ಷಕ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಿ ಹೊರಗೆ ಹೋಗಿದ್ದರು ಎಂದು ಆರೋಪಿಸಿದ್ದಾರೆ. ಅಲ್ಲದೆ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಅಳಲು ಮುಗಿಲು ಮುಟ್ಟಿದೆ.

ಘಟನೆಯ ಕುರಿತು ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Join Whatsapp