ಹಿಜಾಬ್ ತೀರ್ಪು: ಉಡುಪಿ, ಶಿವಮೊಗ್ಗದಲ್ಲಿ ವಿದ್ಯಾರ್ಥಿನಿಯರು ಮನೆಗೆ ವಾಪಸ್

Prasthutha|

ಉಡುಪಿ: ಇಂದು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ತರಗತಿಯೊಳಗೆ ಹಿಜಾಬ್ ಧರಿಸಲು ಕಾಲೇಜು ಪ್ರಾಂಶುಪಾಲರು, ಉಪನ್ಯಾಸಕರು ಬಿಡದ ಕಾರಣ ವಿದ್ಯಾರ್ಥಿನಿಯರು ಮನೆಗೆ ವಾಪಸ್ ತೆರಳಿದ್ದಾರೆ.

- Advertisement -

ಉಡುಪಿಯ ಹಿಜಾಬ್ ಅವಕಾಶ ನಿರಾಕರಿಸಲ್ಪಟ್ಟು ಹೈಕೋರ್ಟ್ ಮೊರೆ ಹೋದ ಆರು ಮಂದಿ ವಿದ್ಯಾರ್ಥಿನಿಯರು, ಶಿವಮೊಗ್ಗದಲ್ಲಿ ಕಮಲಾ ನೆಹರೂ ಕಾಲೇಜಿನಲ್ಲಿ 15 ವಿದ್ಯಾರ್ಥಿನಿಯರು ಇಂದು ಬೆಳಗ್ಗೆ ಎಂದಿನಂತೆ ಕಾಲೇಜಿಗೆ ಹಿಜಾಬ್ ಧರಿಸಿಕೊಂಡು ಹೋಗಿದ್ದರು. ಈ ವೇಳೆ ಪ್ರಾಂಶುಪಾಲರು, ಉಪನ್ಯಾಸಕರು ತರಗತಿಯೊಳಗೆ ಹಿಜಾಬ್ ಧರಿಸಲು ಬಿಡದ ಕಾರಣ ವಿದ್ಯಾರ್ಥಿನಿಯರು ವಾಪಸ್ ತೆರಳಿದ್ದಾರೆ.

ಇನ್ನು ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ವಿದ್ಯಾರ್ಥಿನಿ ಐಶಾ ಶೀಫತ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು ತುರ್ತು ವಿಚಾರಣೆ ನಡೆಸಬೇಕೆಂದು ಕೋರಿದ್ದಾರೆ.

Join Whatsapp