‘ಮದ್ಯದಂಗಡಿ ಮುಚ್ಚುವವರೆಗೆ ಹುಡುಗಿಯರನ್ನು ಶಾಲೆಗೆ ಕಳುಹಿಸುವುದಿಲ್ಲ’: ವಿನೂತನ ಅಭಿಯಾನ ನಡೆಸಿದ ಗ್ರಾಮಸ್ಥರು!

Prasthutha|

ಶಿವಮೊಗ್ಗ: ಗ್ರಾಮದಲ್ಲಿನ ಮದ್ಯದಂಗಡಿಯನ್ನು ಮುಚ್ಚುವವರೆಗೆ ಹುಡುಗಿಯರನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬೆಳ್ಳಿಕೊಪ್ಪ ಗ್ರಾಮಸ್ಥರು ಅಭಿಯಾನ ಆರಂಭಿಸಿದ್ದಾರೆ.

- Advertisement -

ಈ ಹಿಂದೆಯೂ ಗ್ರಾಮದಲ್ಲಿನ ಮದ್ಯದ ಅಂಗಡಿಯ ವಿರುದ್ಧ ಪ್ರತಿಭಟನೆ ನಡೆಸಿದ್ದ ಬೆಳ್ಳಿಕೊಪ್ಪ ಗ್ರಾಮಸ್ಥರು ಇದೀಗ ಮತ್ತೊಂದು ಅಭಿಯಾನ ಆರಂಭಿಸಿದ್ದು, ಮದ್ಯದ ಅಂಗಡಿ ಬಂದ್ ಮಾಡದ ಹೊರತು ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಹೋರಾಟ ನಡೆಸುತ್ತಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ಮದ್ಯದಂಗಡಿ ವಿರೋಧಿಸಿ ಚುನಾವಣೆ ಬಹಿಷ್ಕಾರ ಮಾಡಿದ್ದರು. ಈ ವೇಳೆ ಅಧಿಕಾರಿಗಳು ಮದ್ಯದಂಗಡಿ ಬಂದ್ ಮಾಡಿ, ಮತದಾನ ಮಾಡುವಂತೆ ಮನವೊಲಿಸಿದ್ದರು. ಗ್ರಾಮದಲ್ಲಿ ಇದೀಗ ಎಂಎಸ್‌ಐಎಲ್ ಮಳಿಗೆ ಆರಂಭಿಸಿರುವ ಹಿನ್ನೆಲೆಯಲ್ಲಿ ಬೆಳ್ಳಿಕೊಪ್ಪ ಗ್ರಾಮಸ್ಥರು ವಿನೂತನ ಪ್ರತಿಬಟನೆ ನಡೆಸಿದ್ದಾರೆ. ಮದ್ಯದಂಗಡಿ ಬಂದ್ ಮಾಡದಿದ್ದರೆ ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

Join Whatsapp