‘ಮುಖ್ಯಮಂತ್ರಿಗಳೇ ಎಲ್ಲಾ ಖಾತೆಗಳನ್ನು ತಮ್ಮ ಕುಟುಂಬದವರಿಗೆ ಕೊಟ್ಟುಬಿಡಿ’

Prasthutha|

ವಿಜಯಪುರ: ಸಚಿವರ ಖಾತೆಗಳಲ್ಲಿ ಮುಖ್ಯಮಂತ್ರಿಗಳು ಹಸ್ತಕ್ಷೇಪ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಎಲ್ಲಾ ಮಂತ್ರಿಗಳು ಯಾಕೆ ಬೇಕು, ಎಲ್ಲಾ ಖಾತೆಗಳನ್ನು ನಿಮ್ಮ ಮಗ ವಿಜಯೇಂದ್ರಗೇ ವಹಿಸಿಕೊಡುವುದು ಸೂಕ್ತ ಎಂದು ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಖಾತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ ಅವರು ರಾಜ್ಯಪಾಲರಿಗೆ ಹಾಗೂ ಪಕ್ಷದ ಹೈಕಮಾಂಡ್ ಗೆ ಪತ್ರ ಬರೆದಿದ್ದನ್ನು ಸಮರ್ಥಸಿಕೊಂಡ ಯತ್ನಾಳ್ ಅವರು, ಯಡಿಯೂರಪ್ಪ ಅವರು ಈಶ್ವರಪ್ಪ ಅವರ ಖಾತೆಯಲ್ಲಿ ಹಸ್ತಕ್ಷೇಪ ಮಾಡಿದ್ದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೀವು ಎಲ್ಲಾ ಇಲಾಖೆಗಳಲ್ಲೂ ಹಸ್ತಕ್ಷೇಪ ಮಾಡುವುದಾದರೆ ಸಚಿವ ಸಂಪುಟ ಯಾಕೆ ಬೇಕು?. ಮುಖ್ಯಮಂತ್ರಿಗಳು ಎಂದರೆ ಏನು? ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಹೇಳಿದರೆ ರಾತ್ರೋರಾತ್ರಿ ಹಣ ಬಿಡುಗಡೆ ಆಗುತ್ತದೆ. ಕೊಪ್ಪಳಕ್ಕೆ ಹಣ ಬಿಡುಗಡೆ ಮಾಡಿದ್ದಕ್ಕೆ ವಿಜಯೇಂದ್ರಗೆ ಅಭಿನಂದನೆ ಸಲ್ಲಿಸಲಾಗಿದೆ. ಅವರು ಯಾವ ಸಂವಿಧಾನಿಕ ಹುದ್ದೆಯಲ್ಲಿದ್ದಾರೆ?. ಅಪ್ಪ-ಮಕ್ಕಳು ಕಾವೇರಿ ಮನೆಯಲ್ಲಿ ಕುಳಿತು ಎಲ್ಲಾ ಇಲಾಖೆಗಳನ್ನು ಡೀಲ್ ಮಾಡುತ್ತಿದ್ದಾರೆ ಎಂದು ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.

- Advertisement -

ಮೇ 2 ರೊಳಗೆ ಪಕ್ಷದಲ್ಲಿ ಭಾರಿ ಸ್ಫೋಟವಾಗಲಿದೆ ಎಂದರ ಯತ್ನಾಳ್, ಮೇ 2ರೊಳೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಬದಲಾಗದಿದ್ದರೆ ಇನ್ನೂ ದೊಡ್ಡ ಸ್ಫೋಟವಾಗಲಿದೆ. ಬಿಜೆಪಿಯನ್ನು ಈ ಹಿಂದೆ ಕಟ್ಟಿದವರು ಸಚಿವ ಈಶ್ವರಪ್ಪ. ನಾವು ಪಕ್ಷ ಕಟ್ಟುವಾಗ ವಿಜಯೇಂದ್ರಗೆ ಚಡ್ಡಿ ಹಾಕಲು ಬರುತ್ತಿರಲಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Join Whatsapp