ಸರ್ಕಾರಿ ಕೆಲಸ ಕೊಡಿ,ಇಲ್ಲವೇ ಬೋರ್ವೆಲ್ ಹಾಕಿಸಿ: ಮತಪೆಟ್ಟಿಗೆಯಲ್ಲಿ ಹೀಗೊಂದು ವಿಶೇಷ ಪತ್ರ

Prasthutha|

ಚಾಮರಾಜನಗರ: ಮತದಾರರೊಬ್ಬರು ಅಭ್ಯರ್ಥಿಗೆ ವಿಶೇಷ ಬೇಡಿಕೆ ಪತ್ರ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

- Advertisement -

ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿದ್ದ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಸದ್ಯ ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ವೇಳೆ ಮತದಾರರೊಬ್ಬರು ಅಭ್ಯರ್ಥಿಗೆ ಮತ ಹಾಕುವ ಜೊತೆಗೆ ಬೇಡಿಕೆ ಪತ್ರ ಕೂಡ ಹಾಕಿರುವುದು ಮತ ಎಣಿಕೆ ವೇಳೆ ಬಯಲಾಗಿದೆ. 

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಗಣಿಗನೂರು ಗ್ರಾಮದ ರಾಜೇಂದ್ರ ಎಂಬ ಮತದಾರ ಕೊಳವೆ ಬಾವಿ ತೋಡಿಸಿಕೊಡಿ ಎಂದು ಪತ್ರ ಬರೆದು ಮತ ಪೆಟ್ಟಿಗೆಗೆ ಪತ್ರ ಹಾಕಿದ್ದಾರೆ. ನಾನು ಎಂ.ಎ, ಬಿ.ಎಡ್ ಮಾಡಿದ್ದೇನೆ. ಆದರೆ ನನಗೆ ಕೆಲಸ ಇಲ್ಲ. ನಮ್ಮಪ್ಪನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದೇನೆ. ಜಮೀನಿಗೆ ಕೊಳವೆ ಬಾವಿ ಅವಶ್ಯಕತೆ ಇದೆ. ನನಗೆ ಸರ್ಕಾರಿ ಕೆಲಸ ಕೊಡಿ ಇಲ್ಲ ಅಂದರೆ ಜಮೀನಿನಲ್ಲಿ ಕೊಳವೆಬಾವಿ ತೋಡಿಸಿಕೊಡಿ ಎಂದು ಯುವಕ ಪತ್ರದ ಮೂಲಕ ಮನವಿ ಮಾಡಿದ್ದಾನೆ. ಸದ್ಯ ಈ ಪತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Join Whatsapp