ಗೋದ್ರಾ ರೈಲು ದುರಂತ | 17 ವರ್ಷ ಜೈಲಿನಲ್ಲಿದ್ದ ಕೈದಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

Prasthutha|

ಹೊಸದಿಲ್ಲಿ: 2002ರ ಗೋದ್ರಾ ರೈಲು ಬೋಗಿ ಸುಟ್ಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಯೊಬ್ಬನಿಗೆ ಸುಪ್ರೀಂ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.

- Advertisement -

ದೀರ್ಘಾವಧಿಯಿಂದ ಜೈಲಿನಲ್ಲಿರುವುದನ್ನು ಗಮನಿಸಿ ಜಾಮೀನು ಮಂಜೂರು ಮಾಡಬೇಕು ಎಂಬ ಅಪರಾಧಿ ಫಾರೂಕ್ ಪರ ವಕೀಲರ ಮನವಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ. ಎಸ್. ನರಸಿಂಹ ಅವರನ್ನೊಳಗೊಂಡ ಪೀಠವು ಈ ನಿರ್ಧಾರ ಪ್ರಕಟಿಸಿತು.

ಗುಜರಾತ್ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ‘ಇದು ಅತ್ಯಂತ ಘೋರ ಅಪರಾಧ. ಇದರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 59 ಜನರನ್ನು ಸಜೀವ ದಹನ ಮಾಡಲಾಗಿತ್ತು’ ಎಂದು ತಿಳಿಸಿದರು.

- Advertisement -

ಸಾಬರಮತಿ ಎಕ್ಸ್ ಪ್ರೆಸ್ ನ ಬೋಗಿಗಳಿಗೆ ಕಲ್ಲು ತೂರಾಟ ನಡೆಸಿದ ಆರೋಪದಲ್ಲಿ ಫಾರೂಕ್ ಮತ್ತು ಇತರ ಹಲವರಿಗೆ ಶಿಕ್ಷೆ ವಿಧಿಸಲಾಗಿತ್ತು.

2002ರ ಫೆಬ್ರವರಿ 27ರಂದು, ಗೋದ್ರಾದಲ್ಲಿ ಸಾಬರಮತಿ ಎಕ್ಸ್ ಪ್ರೆಸ್ ನ ಎಸ್ -6 ಬೋಗಿಗೆ ಬೆಂಕಿ ಹಚ್ಚಲಾಗಿತ್ತು. ಘಟನೆಯಲ್ಲಿ 59 ಜನರು ಮೃತಪಟ್ಟಿದ್ದರು.

Join Whatsapp