ಚಿನ್ನ ಕಳ್ಳಸಾಗಣಿಕೆ ಪ್ರಕರಣ: ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ ಜೈಲಿನಿಂದ ಬಿಡುಗಡೆ

Prasthutha|

ತಿರುವನಂತಪುರಂ: ಅಕ್ರಮವಾಗಿ ಚಿನ್ನ ಸಾಗಣೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್‌ ಬಂಧನವಾಗಿ 16 ತಿಂಗಳ ಬಳಿಕ ಜೈಲಿನಿಂದ ಹೊರಬಂದಿದ್ದಾರೆ.

- Advertisement -

ಕೇರಳ ಹೈಕೋರ್ಟ್‌ ನವೆಂಬರ್‌ 2 ರಂದು 25 ಲಕ್ಷ ರೂಪಾಯಿಗಳ ಬಾಂಡ್‌ ಹಾಗೂ ಇಬ್ಬರ ಶೂರಿಟಿಯೊಂದಿಗೆ ಜಾಮೀನು ನೀಡಿದ್ದ ಹಿನ್ನೆಲೆಯಲ್ಲಿ ಇಂದು ಜೈಲಿನಿಂದ ಹೊರ ಬಂದಿದ್ದಾರೆ.

ಯುಎಪಿಎ ಪ್ರಕರಣದಲ್ಲಿ ಸುರೇಶ್ ಮತ್ತು ಇತರ 7 ಮಂದಿಗೆ ಕೇರಳ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಅವರು ವಿರುದ್ಧ ಆರೋಪಿಸಿದಂತೆ ಯಾವುದೇ ಭಯೋತ್ಪಾದಕ ಕೃತ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿಲ್ಲ ಎಂದು ಹೇಳಿದೆ.

Join Whatsapp