ಹನುಮಾನ್‌ ಕೃಪೆಯಿಂದ ಜೈಲಿನಿಂದ ಹೊರಗೆ ಬಂದಿದ್ದೇನೆ: ಕೇಜ್ರಿವಾಲ್

Prasthutha|

ನವದೆಹಲಿ: ಹನುಮಾನ್‌ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.

- Advertisement -

ಹನುಮಾನ್ ದೇಗುಲಕ್ಕೆ ಭೇಟಿ ನೀಡಿದ ಬಳಿಕಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಸರ್ವಾಧಿಕಾರದಿಂದ ದೇಶವನ್ನು ರಕ್ಷಣೆ ಮಾಡಬೇಕಿದೆ. ನಾನು ಸಂಪೂರ್ಣ ಶಕ್ತಿಯಿಂದ ಹೋರಾಡುತ್ತೇನೆ. ನನಗೆ 140 ಕೋಟಿ ಜನರ ಬೆಂಬಲ ಬೇಕು ಕೇಜ್ರಿವಾಲ್ ಹೇಳಿದರು.

ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಶುಕ್ರವಾರ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದ ಬಳಿಕ ಸಂಜೆ ಜೈಲಿನಿಂದ ಕೇಜ್ರಿವಾಲ್ ಹೊರಗೆ ಬಂದಿದ್ದಾರೆ.

Join Whatsapp