ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಸರ್ಕಾರಿ ಬಸ್

Prasthutha|

ಚಿಕ್ಕಮಗಳೂರು : ಮಲೆನಾಡಲ್ಲಿ ಭೀಕರ ಗಾಳಿ-ಮಳೆಗೆ  ಅನೇಕ ಅನಾಹುತಗಳು ಸಂಭವಿಸುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿದ  ಸರ್ಕಾರಿ ಬಸ್  ರಸ್ತೆ ಪಕ್ಕದ ಚರಂಡಿಗೆ ಇಳಿದ ಘಟನೆ ಮೂಡಿಗೆರೆ ತಾಲೂಕಿನ ಗುತ್ತಿಹಳ್ಳಿಯಲ್ಲಿ ನಡೆದಿದೆ.

- Advertisement -

ಗುತ್ತಿಹಳ್ಳಿಯಿಂದ ಬೆಟ್ಟಗೆರೆ ಮೂಲಕ ಮೂಡಿಗೆರೆಗೆ ಬರುತ್ತಿದ್ದ ಬಸ್  ಮಳೆಯ ರಭಸಕ್ಕೆ ಚಾಲಕನ ನಿಯಂತ್ರಣ ಮೀರಿ ರಸ್ತೆ ಬದಿಯ ದಿಣ್ಣೆಗೆ ಒರಗಿದೆ.

ಬಸ್ಸಿನಲ್ಲಿ ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರಿದ್ದು, ಎಲ್ಲರೂ ಡ್ರೈವರ್ ಸೀಟಿನ ಮೂಲಕ ಹೊರಗಿಳಿದಿದ್ದಾರೆ. ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.



Join Whatsapp