ಸರ್ಕಾರಿ ಬಸ್ ಹರಿದು ಮಹಿಳೆ ಸಾವು: ಚಾಲಕ ವಶಕ್ಕೆ

Prasthutha|

ಬೆಂಗಳೂರು: ಕೆಎಸ್​ ಆರ್​ ಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮೆಜೆಸ್ಟಿಕ್​ ನ ಸಂಗೊಳ್ಳಿ ರಾಯಣ್ಣ ಸೇತುವೆ ಬಳಿ ನಡೆದಿದೆ.

- Advertisement -

ಲತಾ ಮೃತ ಮಹಿಳೆ.

ಕೆಎಸ್​ ಆರ್​ ಟಿಸಿ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಮಹಿಳೆ ಮತ್ತು ಪತಿ ಬೈಕ್​ ನಲ್ಲಿ ಬಟ್ಟೆ ಅಂಗಡಿಗೆ ಶಾಪಿಂಗ್​ ಗಾಗಿ ತೆರಳುತ್ತಿದ್ದರು. ಮತ್ತೊಂದು ಬೈಕ್​ನಲ್ಲಿ ಪುತ್ರಿ ಕೂಡ ತೆರಳುತ್ತಿದ್ದರು. ಈ ವೇಳೆ ಸಂಗೊಳ್ಳಿ ರಾಯಣ್ಣ ಮೇಲ್ಸೇತುವೆ ಇಳಿಯುವ ವೇಳೆ ವೇಗವಾಗಿ ಬಲಕ್ಕೆ ಬಸ್ ಬಂದಿದ್ದು, ಬಸ್​​ ಹಿಂಬದಿ ದ್ವಿಚಕ್ರ ವಾಹನಕ್ಕೆ ಟಚ್ ಆಗಿ ಇಬ್ಬರು ರಸ್ತೆಗೆ ಬಿದ್ದಿದ್ದಾರೆ

Join Whatsapp