ಸರ್ಕಾರಿ ನೌಕರರಿಗೆ ‘ವರದಕ್ಷಿಣೆ ಪಡೆದಿಲ್ಲ’ ಎಂಬ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯ

Prasthutha|

ತಿರುವನಂತಪುರ: ಕೇರಳದಲ್ಲಿ ಇತ್ತೀಚೆಗೆ ವರದಕ್ಷಿಣೆ ಸಾವು ಮತ್ತು ಕಿರುಕುಳಗಳು ನಡೆದಿದ್ದು , ಇದರಲ್ಲಿ ಸರ್ಕಾರಿ ನೌಕರರು ಸಹ ಆರೋಪಿಯಾಗಿದ್ದಾರೆ. ಹಾಗಾಗಿ , ಅಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಸರ್ಕಾರಿ ನೌಕರರಿಗೆ ವರದಕ್ಷಿಣೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ಅಫಿದವಿಟ್ ( ಪ್ರಮಾಣಪತ್ರ ) ಸಲ್ಲಿಸಲು ಸೂಚಿಸಿದೆ.

- Advertisement -

ವರದಕ್ಷಿಣೆಯನ್ನು ತಡೆಗಟ್ಟುವ ಕ್ರಮದ ಭಾಗವಾಗಿ ಕೇರಳದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು , ಸರ್ಕಾರಿ ನೌಕರರಿಗೆ ವರದಕ್ಷಿಣೆ ತೆಗೆದುಕೊಂಡಿಲ್ಲ ಎನ್ನುವ ಬಗ್ಗೆ ಪ್ರಮಾಣೀಕರಿಸಲು ಸುತ್ತೋಲೆ ಹೊರಡಿಸಿದೆ. ಕೇರಳದಲ್ಲಿ ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಯಲ್ಲಿದ್ದು , ಈ ಕಾಯ್ದೆಯ ಅನ್ವಯ ಸರ್ಕಾರಿ ನೌಕರರಿಗೆ ಪ್ರಮಾಣಪತ್ರ ಸಲ್ಲಿಸುವಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ.

‘ವರದಕ್ಷಿಣೆ ಪಡೆಯುವುದು ಮತ್ತು ನೀಡುವ ಪ್ರಕ್ರಿಯೆಯಲ್ಲಿ ಸರ್ಕಾರಿ ನೌಕರರು ಭಾಗಿಯಾಗುತ್ತಿರುವುದು ನಾಚಿಕೆಗೇಡಿನ ಸಂಗತಿ ‘ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಮದುವೆಯಾಗಿರುವ ಪುರುಷ ಸರ್ಕಾರಿ ನೌಕರರು ಒಂದು ತಿಂಗಳ ಅವಧಿಯೊಳಗೆ ತಾವು ವರದಕ್ಷಿಣೆ ಪಡೆದಿಲ್ಲ ಎನ್ನುವ ಕುರಿತು ಪ್ರಮಾಣಪತ್ರ ಸಲ್ಲಿಸಬೇಕು. ಈ ಪತ್ರಕ್ಕೆ ನೌಕರನ ಪತ್ನಿ , ತಂದೆ – ತಾಯಿ ಮತ್ತು ಅತ್ತೆ – ಮಾವ ಸಹಿ ಹಾಕಬೇಕ . ಈ ಬಗ್ಗೆ ಇಲಾಖೆಯ ಮುಖ್ಯಸ್ಥರು , ಜಿಲ್ಲಾ ವರದಕ್ಷಿಣೆ ನಿಷೇಧ ಅಧಿಕಾರಿಗೆ ಅರ್ಥ ವಾರ್ಷಿಕ ವರದಿ ಸಲ್ಲಿಸಬೇಕು ಎಂದು ನಿರ್ದೇಶನ ನೀಡಲಾಗಿದೆ.

- Advertisement -

ವರದಕ್ಷಿಣೆ ವಿರುದ್ಧ ಜಾಗೃತಿ ಮೂಡಿಸಲು ಈಚೆಗಷ್ಟೇ ಕೇರಳದ ರಾಜ್ಯಪಾಲ ಆರಿಫ್ ಮುಹಮ್ಮದ್ ಅವರು ವಿವಿಧ ಗಾಂಧಿಪರ ಸಂಘಟನೆಗಳ ಜತೆಗೂಡಿ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿದ್ದರು.

Join Whatsapp