ಮಂಗಳೂರಿನಲ್ಲಿ ನೂತನ ಮೀನುಗಾರಿಕೆ ವಿಶ್ವವಿದ್ಯಾಲಯ: ಸಚಿವ ಅಂಗಾರ

Prasthutha|

ದಾವಣಗೆರೆ: ಕರಾವಳಿ ಮತ್ತು ಒಳನಾಡು ಮೀನುಗಾರಿಕೆ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ನೂತನವಾಗಿ ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪಿಸುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ ಎಂದು ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಎಸ್.ಅಂಗಾರ ಹೇಳಿದ್ದಾರೆ.

- Advertisement -

ದಾವಣಗೆರೆ ಜಿಲ್ಲೆಯಲ್ಲಿಂದು ವಿವಿಧ ಮೀನುಗಾರಿಕಾ ಘಟಕಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಕರಾವಳಿ ಮೀನುಗಾರಿಕೆಗೆ ಸಂಬಂಧಿಸಿದಂತೆ ಪ್ರವಾಸೋದ್ಯಮ, ಬಂದರು ಅಭಿವೃದ್ಧಿ, ಬೋಟು ನಿಲ್ದಾಣಗಳ ನಿರ್ಮಾಣ, ಕಾರ್ಮಿಕರಿಗೆ ಉದ್ಯೋಗ ಕಲ್ಪಿಸುವುದು ಪ್ರಧಾನಮಂತ್ರಿಗಳ ಆಶಯವಾಗಿದ್ದು, ಇದಕ್ಕಾಗಿ ಈ ಬಾರಿ 1 ಸಾವಿರದ 200 ಕೋಟಿ ರೂಪಾಯಿಗಳ ಅಂದಾಜು ವೆಚ್ಚದಲ್ಲಿ ಸಾಗರ ಮಾಲಾ, ಮತ್ಸ್ಯ ಸಂಪದ ಯೋಜನೆಯಡಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವ ಅಂಗಾರ ಹೇಳಿದರು.

Join Whatsapp