ಕುಲಾಧಿಪತಿ ಹುದ್ದೆಯಿಂದ ನಾನು ಕೆಳಗಿಳಿಯುತ್ತೇನೆ, ನೀವೇ ಅದನ್ನು ನಿರ್ವಹಿಸಿ: ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್

Prasthutha|

ತಿರುವನಂತಪುರಂ: ಕೇರಳದ ಉನ್ನತ ಶಿಕ್ಷಣ ಕ್ಷೇತ್ರ, ರಾಜ್ಯದ ವಿಶ್ವವಿದ್ಯಾಲಯಗಳ ಉಪ-ಕುಲಪತಿ ಹುದ್ದೆಯಲ್ಲಿ ರಾಜಕೀಯ ಹಸ್ತಕ್ಷೇಪ ನಡೆಯುತ್ತಿರುವ ಬಗ್ಗೆ ರಾಜ್ಯಪಾಲ, ಯೂನಿವರ್ಸಿಟಿಗಳ ಕುಲಾಧಿಪತಿಯೂ ಆಗಿರುವ ಆರಿಫ್​ ಮುಹಮ್ಮದ್​ ಖಾನ್​ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ಗೆ ಪತ್ರ ಬರೆದಿದ್ದಾರೆ. 

- Advertisement -

ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ರಾಜಕೀಯ ಹಸ್ತಕ್ಷೇಪ ಹೀಗೆ ಮುಂದುವರಿದರೆ ನಾನು ಕುಲಾಧಿಪತಿ ಹುದ್ದೆಗೆ ರಾಜೀನಾಮೆ ನೀಡುತ್ತೇನೆ. ಆ ಸ್ಥಾನವನ್ನು ನೀವೇ ವಹಿಸಿಕೊಳ್ಳಿ ಎಂದು ಹೇಳಿದ್ದಾರೆ.

ರಾಜ್ಯದ ಉನ್ನತ ಯೂನಿವರ್ಸಿಟಿಗಳ ಉಪಕುಲಪತಿಗಳ ನೇಮಕದ ವಿಚಾರದಲ್ಲಿ ಸಿಪಿಐ (ಎಂ) ನೇತೃತ್ವದ ಕೇರಳ ಸರ್ಕಾರ ತೀವ್ರ ಹಸ್ತಕ್ಷೇಪ ಮಾಡುತ್ತಿದೆ. ಈ ಮೂಲಕ ಕುಲಪತಿಯಾದ ನನ್ನ ಅಧಿಕಾರವನ್ನು ದುರ್ಬಲಗೊಳಿಸುತ್ತಿದೆ ಎಂದು ರಾಜ್ಯಪಾಲ ಆರಿಫ್​ ಮುಹಮ್ಮದ್​ ಖಾನ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

Join Whatsapp