Home ಟಾಪ್ ಸುದ್ದಿಗಳು ರಾಜ್ಯಪಾಲರೇ ವಿರೋಧ ಪಕ್ಷದ ನಾಯಕನಂತೆ ನಡೆದುಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್

ರಾಜ್ಯಪಾಲರೇ ವಿರೋಧ ಪಕ್ಷದ ನಾಯಕನಂತೆ ನಡೆದುಕೊಳ್ಳುತ್ತಿದ್ದಾರೆ: ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ರಾಜ್ಯಪಾಲರೇ ವಿರೋಧ ಪಕ್ಷದ ನಾಯಕನ ರೀತಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಅರ್ಕಾವತಿ ಡಿನೋಟಿಫಿಕೇಶನ್ ಕೇಸ್ ಕೆಂಪಣ್ಣ ಆಯೋಗದ ವರದಿ ರಾಜ್ಯಪಾಲರು ಕೇಳಿದ ಬಗ್ಗೆ ಮಾತನಾಡಿ, ರಾಜ್ಯಪಾಲರ ನಡೆ ನೋಡಿದರೆ ಇವರೇ ವಿರೋಧ ಪಕ್ಷದ ನಾಯಕರ ರೀತಿ ಆಡುತ್ತಿದ್ದಾರೆ. ಆರ್‌ಟಿಐ ಆಕ್ಟಿವಿಸ್ಟ್‌ಗಳು ಅರ್ಜಿ ಹಾಕೋದು ಮಾಹಿತಿ ಕೇಳುತ್ತಾರೆ. ಆ ರೀತಿ ರಾಜ್ಯಪಾಲರು ನಡೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯಪಾಲರು ತಮಗೆ ಬಂದ ಪ್ರತಿಯೊಂದು ಅರ್ಜಿಗೂ ಸರ್ಕಾರಕ್ಕೆ ಬರೆಯೋದಕ್ಕೆ ಶುರು ಮಾಡಿದ್ದಾರೆ. ಈ ರೀತಿ ರಾಜ್ಯಪಾಲರು ನಡೆದುಕೊಳ್ಳಬಾರದು. ಅದು ಅವರ ಸ್ಥಾನಕ್ಕೆ ಗೌರವ ತರುವುದಿಲ್ಲ. ಪ್ರಮುಖ ಕೇಸುಗಳ ಮೇಲೆ ಆದ್ಯತೆ ಕೊಡಬೇಕಾಗಿತ್ತು. ತನಿಖೆ ಮಾಡಿ ಪೊಲೀಸ್ ಅಧಿಕಾರಿಗಳ ಪ್ರಾಸಿಕ್ಯೂಶನ್ ಕೇಳಿದಾಗ ಅಂತಹದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಅದನ್ನು ಬಿಟ್ಟು ರಾಜ್ಯದಲ್ಲಿ ಏನೋ ನಡೆಯುತ್ತಿದೆ ಎನ್ನುವ ರೀತಿ ರಾಜ್ಯಪಾಲರು ಪತ್ರ ಬರೆಯುತ್ತಿರುವುದು ಖಂಡನೀಯ ಎಂದರು.

Join Whatsapp
Exit mobile version