ಪ್ರಿಯಾಂಕ್​ ವಿರುದ್ಧ ಸಿಎ ನಿವೇಶನ ಮಂಜೂರು ಆರೋಪ: ಸರ್ಕಾರಕ್ಕೆ ವಿವರಣೆ ಕೇಳಿದ ರಾಜ್ಯಪಾಲ

Prasthutha|

ಬೆಂಗಳೂರು: ಪ್ರಭಾವ ಬಳಸಿ ಕೆಐಎಡಿಬಿಯಿಂದ ಸಿದ್ದಾರ್ಥ ಟ್ರಸ್ಟ್ ಗೆ ಸಿಎ ನಿವೇಶನ ಮಂಜೂರು ಮಾಡಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಆರೋಪ ಕೇಳಿಬಂದಿದೆ.

- Advertisement -


ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಪತ್ರ ಬರೆದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಟ್ರಸ್ಟಿಗಳಾಗಿರವ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ನಿಯಮ ಉಲ್ಲಂಘನೆಯ ಜೊತೆಗೆ ತರಾತುರಿಯಲ್ಲಿ ಕೆಐಎಡಿಬಿಯಿಂದ ಐದು ಎಕರೆ ಸಿ.ಎ ನಿವೇಶನ ಮಂಜೂರು ಮಾಡಲಾಗಿದೆ. ಪ್ರಿಯಾಂಕ್ ಖರ್ಗೆ ಸಚಿವರಾಗಿದ್ದುಕೊಂಡು ಹೀಗೆ ಸರ್ಕಾರಿ ಸೌಲಭ್ಯ ಪಡೆದಿದ್ದು ಸರಿಯೇ ಎಂದು ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

- Advertisement -


ರಾಜ್ಯಪಾಲರಿಗೆ ಎರಡು ಸಂವಿಧಾನ ಇದೆ. ಬಿಜೆಪಿ, ಜೆಡಿಎಸ್ ದು ಒಂದು ಸಂವಿಧಾನ, ಕಾಂಗ್ರೆಸ್ ಗೊಂದು ಸಂವಿಧಾನ. ನಮ್ಮ ವಿಚಾರದಲ್ಲಿ ಬಿಜೆಪಿ ಮೊದಲು 10 ಆರೋಪ ಮಾಡುತ್ತಿತ್ತು. ಎರಡನೇ ದಿನ ಐದು ಆರೋಪಗಳನ್ನು ಮಾಡಿದ್ದರು, ಈಗ ಸುಮ್ಮನಿದ್ದಾರೆ. ಛಲವಾದಿ ನಾರಾಯಣಸ್ವಾಮಿ ಬಿಟ್ಟು ಬೇರೆ ಯಾರೂ ಏಕೆ ಮಾತನಾಡುತ್ತಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.



Join Whatsapp
Exit mobile version