ನಾಳೆ ರಾಜ್ಯಪಾಲರ ದ.ಕ ಜಿಲ್ಲಾ ಪ್ರವಾಸ

Prasthutha|

ಮಂಗಳೂರು : ಕರ್ನಾಟಕ ಸರ್ಕಾರದ ಘನವೆತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್ ಅವರು ನಾಳೆ ( ಸೆ.8 ಶುಕ್ರವಾರ) ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ.

- Advertisement -

ನಾಳೆ ಬೆಳಿಗ್ಗೆ 11 ಗಂಟೆಗೆ ಅವರು ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ನಂತರ 12 ಗಂಟೆಗೆ ನಗರದ ಟಿ.ಎಂ.ಎ. ಪೈ ಕನ್‍ವೆನ್‍ಶನ್ ಸಭಾಂಗಣದಲ್ಲಿ ‘ದಿ ಫಿಸಿಯೋಥೆರಪಿ ಕಾನ್ಫರೆನ್ಸ್ ಮ್ಯಾಂಗಳೂರ್ ಫಿಸಿಯೋಕಾನ್ 2023’ ಕಾರ್ಯಕ್ರಮ ಉದ್ಘಾಟಿಸುವರು.

ಮಧ್ಯಾಹ್ನ  1.30ಕ್ಕೆ ಖಾಸಗಿ ವಿಶ್ವವಿದ್ಯಾನಿಲಯಗಳು ಮತ್ತು ಕಾಲೇಜುಗಳ ಆಡಳಿತದ ಅಧಿಕಾರಿಗಳೊಂದಿಗೆ ಸಂವಾದ ನಡೆಸುವರು. ಸಂಜೆ 5.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.

Join Whatsapp