ಹಿಜಾಬ್ ವಿವಾದ ಮಾಡುವ ಮೂಲಕ ಭೇಟಿ ಹಠಾವೋಗೆ ಮುಂದಾದ ಸರ್ಕಾರ: ಕುಮಾರಸ್ವಾಮಿ ಕಿಡಿ

Prasthutha|

ಬೆಂಗಳೂರು: ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು; ” ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ. ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ ಹಠಾವೋ ಮಾಡಲು ಹೊರಟಿದೆ ” ಎಂದರು.
ಕೋವಿಡ್ ಸಂಕಷ್ಟದ ಸಮಯದಲ್ಲಿ ಸರಿಯಾಗಿ ಶಾಲೆ ಕಾಲೇಜುಗಳು ನಡೆಯದೇ ವಿದ್ಯಾರ್ಥಿಗಳು ಮತ್ತು ಪೋಷಕರು ಒದ್ದಾಡುತ್ತಿದ್ದಾರೆ. ಇಂಥ ಕಷ್ಟದ ಸಮಯದಲ್ಲಿ ಹಿಜಾಬ್ ವಿವಾದವನ್ನು ಸೃಷ್ಟಿ ಮಾಡಲಾಗಿದೆ. ಇದು ಅನಗತ್ಯವಾಗಿತ್ತು ಎಂದು ಮಾಜಿ ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ಸರಕಾರಗಳು ಬೇಟಿ ಪಡಾವ್, ಬೇಟಿ ಬಚಾವ್ ಅಂತಿದ್ದರು. ಈಗ ಬೇಟಿ ಹಠಾವ್ ಅನ್ನುವ ರೀತಿಯಲ್ಲಿ ವರ್ತಿಸುತ್ತಿವೆ. ರಾಜ್ಯದ ಸಾಮರಸ್ಯವನ್ನು ಹಾಳು ಮಾಡಲಾಗುತ್ತಿದೆ. ಶಾಂತಿಗೆ ಮತ್ತು ಪ್ರಗತಿಗೆ ಹೆಸರಾದ ರಾಜ್ಯದಲ್ಲಿ ಸಾಮರಸ್ಯ ನೆಲೆಸಬೇಕು ಎನ್ನುವ ಮನಸ್ಸಿದ್ದರೆ ರಾಷ್ಟ್ರೀಯ ಪಕ್ಷಗಳ ನಾಯಕರು ಹಿಜಾಬ್ ಮತ್ತು ಕೇಸರಿ ಶಾಲುಗಳ ವಿಷಯವನ್ನು ಇಲ್ಲಿಗೆ ಬಿಡಲಿ ಎಂದು ಕುಮಾರಸ್ವಾಮಿ ಅವರು ಕಿವಿಮಾತು ಹೇಳಿದರು.
ಸಿಎಂ ಸರಿಯಾಗಿ ನಿಭಾಯಿಸಬೇಕು:
ಯಾವುದೇ ಅಸೂಯೆ, ದ್ವೇಷ ಇಲ್ಲ ನಿರ್ಮಲ ಮನಸಿನ ಮಕ್ಕಳಲ್ಲಿ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ವಿಷ ತುಂಬುವುದು ಬೇಡ. ಕಳೆದ ಹದಿನೈದು ದಿನಗಳಿಂದ ಕೇಳಿ ಬರುತ್ತಿರುವ ಈ ವಿಷಯವನ್ನು ಇಲ್ಲಿಗೇ ಬಿಡುವುದು ಉತ್ತಮ. ಮುಖ್ಯಮಂತ್ರಿಗಳು ಇಂಥ ಸೂಕ್ಷ್ಮ ವಿಷಯಗಳನ್ನು ಬೆಳೆಯಲು ಬಿಡದೇ ಸರಿಯಾಗಿ ನಿಭಾಯಿಸಬೇಕು. ಯಾವುದೇ ಕಾರಣಕ್ಕೂ ಸಮಾಜದ ವಾತಾವರಣ ಕಲುಷಿತ ಆಗದ ರೀತಿ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಕರಾವಳಿ ಪ್ರದೇಶದಲ್ಲಿ ಕೆಲ ಕಡೆ ಈ ರೀತಿಯ ಹಿಜಾಬ್ ವ್ಯವಸ್ಥೆ ಇತ್ತು ಅನ್ನುವುದು ಗಮನಕ್ಕೆ ನನ್ನ ಗಮನಕ್ಕೆ ಬಂದಿದೆ. ಸೂಕ್ಷ್ಮವಾದ ಇಂಥ ನಂಬಿಕೆಗಳ ಬಗ್ಗೆ ಯಾರೂ ಕೆರಳಿಸುವ ರೀತಿಯಲ್ಲಿ ವರ್ತಿಸಬಾರದು. ಯಾವ ಶಾಲೆಯಲ್ಲಿ ಹಿಜಾಬ್ ಗೆ ಅನುಮತಿ ಕೊಟ್ಟಿದ್ದಾರೋ ಅವರು ಮುಂದುವರೆಸಿಕೊಂಡು ಹೋಗಲಿ. ಹೊಸದಾಗಿ ಈಗ ಕೆಲವರು ಇಂಥವಕ್ಕೆ ಯಾಕೆ ಅನುಮತಿ ಕೊಟ್ಟರು?ಹಿಂದು-ಮುಸ್ಲಿಮ್ ಅನ್ನುವುದಕ್ಕಿಂತ ಹೆಚ್ಚಾಗಿ ಮಕ್ಕಳಲ್ಲಿ ಇಂತ ಸಂಕುಚಿತ ಭಾವನೆ ಬೆಳೆಯಲು ಯಾರೂ ಅವಕಾಶ ಕೊಡಬಾರದು ಎಂದು ಅವರು ಆಗ್ರಹಪಡಿಸಿದರು.
ರಾಷ್ಟ್ರೀಯ ಪಕ್ಷಗಳಿಗೆ ಶೋಭೆಯಲ್ಲ:

Join Whatsapp