ಸರ್ಕಾರ ಅವೈಜ್ಞಾನಿಕವಾಗಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಿ ಜನರನ್ನು ಮೂರ್ಖರನ್ನಾಗಿ ಮಾಡುತ್ತಿದೆ: ಅಶ್ರಫ್ ಬಡಾಜೆ

Prasthutha|

ಮಂಜೇಶ್ವರ: ಕಾಟಾಚಾರಕ್ಕೆ ಹಾಗೂ ತೋರ್ಪಡಿಕೆಗೆ ಅವೈಜ್ಞಾನಿಕವಾಗಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಿ ಊರಿನ ಜನರ ಸಂಚಾರ  ಸ್ವಾತಂತ್ರ್ಯದ ಹಕ್ಕನ್ನು ಕಸಿದು ಕೊಳ್ಳಲಾಗುತ್ತಿದೆ. ಅಧಿಕಾರಿಗಳು ತಕ್ಷಣ ಊರಿನ ನಾಗರಿಕರ ಅಭಿಪ್ರಾಯಗಳಿಗೆ ಸ್ಪಂದಿಸಬೇಕು ಎಂದು ಎಸ್.ಡಿ.ಪಿ.ಐ ಮಂಜೇಶ್ಚರ ಮಂಡಲಾಧ್ಯಕ್ಷ ಅಶ್ರಫ್ ಬಡಾಜೆ ಒತ್ತಾಯಿಸಿದ್ದಾರೆ.

- Advertisement -

ನಾಗರಿಕರ ಸಂಚಾರ ಸ್ವಾತಂತ್ರ್ಯ ನಿಷೇಧಿಸುವ ಅವೈಜ್ಞಾನಿಕ ಎಕ್ಸ್ ಪ್ರೆಸ್ ಹೈವೇ ನಿರ್ಮಾಣಕ್ಕೆದುರಾಗಿ ಊರ ನಾಗರಿಕರು ನಡೆಸುತ್ತಿರುವ ಧರಣಿ ಸತ್ಯಾಗ್ರಹದ ನಾಲ್ಕನೇ ಹಂತದ ಪ್ರತಿಭಟನೆಯನ್ನುದ್ದೇಶಿಸಿ ಅವರು ಮಾತನಾಡಿದರು.



Join Whatsapp