ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧಕ್ಕೆ ಚಿಂತನೆ: ಸಿಎಂ ಸಿದ್ದರಾಮಯ್ಯ

Prasthutha|

ಮಂಗಳೂರು: ರಾಜ್ಯದಲ್ಲಿ ಆನ್ ಲೈನ್ ಗೇಮ್ ನಿಷೇಧ ಮಾಡುವ ಬಗ್ಗೆ ಚಿಂತನೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಆನ್ ಲೈನ್ ಗೇಮ್ ಗಳ ಮೂಲಕ ಸಾಕಷ್ಟು ಜನರು ಹಣವನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಆನ್ ಲೈನ್ ಗೇಮ್ ಗಳನ್ನು ನಿಷೇಧ ಮಾಡಲು ಚಿಂತಿಸಲಾಗಿದೆ ಎಂದರು.


ಮಂಗಳೂರಿನಲ್ಲಿ ಮಾದಕ ವಸ್ತು ಹಾವಳಿ ವಿಪರೀತ ಹೆಚ್ಚಾಗುತ್ತಿದೆ. ಈ ಬಗ್ಗೆ ಏನು ಕ್ರಮ ತೆಗೆದುಕೊಂಡಿದ್ದೀರಿ ಎಂದು ಪೊಲೀಸ್ ಆಯುಕ್ತರನ್ನು ಮುಖ್ಯಮಂತ್ರಿಗಳು ಪ್ರಶ್ನಿಸಿದರು. ಆಯುಕ್ತರ ಉತ್ತರದಿಂದ ಸಮಾಧಾನಗೊಳ್ಳದ ಮುಖ್ಯಮಂತ್ರಿಗಳು, ಗೂಂಡಾಕಾಯ್ದೆ ಅಡಿಯಲ್ಲಿ ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಸೂಚಿಸಿದರು. ಅನೈತಿಕ ಪೊಲೀಸ್ಗಿರಿ ವಿಚಾರದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು. ಯಾವುದೇ ಗುಂಪು, ಯಾವುದೇ ಸಿದ್ಧಾಂತದವರು ಕಾನೂನು ಕೈಗೆತ್ತಿಕೊಂಡು ಅನೈತಿಕ ಪೊಲೀಸ್ ಗಿರಿ ನಡೆಸಿದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲು ಸ್ಪಷ್ಟ ಸೂಚನೆ ನೀಡಿದರು.

Join Whatsapp