ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ದೌರ್ಜನ್ಯದ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದ ಸಚಿವ ವಜಾ

Prasthutha|

ಜೈಪುರ: ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ದೌರ್ಜನ್ಯದ ಬಗ್ಗೆ ಸರ್ಕಾರ ಗಮನ ಹರಿಸಬೇಕು ಎಂದು ತಮ್ಮದೇ ಸರ್ಕಾರವನ್ನು ಟೀಕಿಸಿದ ರಾಜೇಂದ್ರ ಗುಧಾ ಅವರನ್ನು ಸಚಿವ ಸ್ಥಾನದಿಂದ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ವಜಾಗೊಳಿಸಿದ್ದಾರೆ.

- Advertisement -


ರಾಜೇಂದ್ರ ಗುಧಾ ಅವರು ಸೈನಿಕ ಕಲ್ಯಾಣ್, ಗೃಹರಕ್ಷಕ ದಳ ಮತ್ತು ನಾಗರಿಕಾ ರಕ್ಷಣೆ, ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ರಾಜ್ಯ ಸಚಿವರಾಗಿದ್ದರು. ಗುಧಾ ಅವರು ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ ಕೆಲವೇ ಗಂಟೆಗಳ ಬಳಿಕ ಈ ಮಹತ್ತರ ಬೆಳವಣಿಗೆ ನಡೆದಿದೆ.


ರಾಜಸ್ಥಾನದಲ್ಲೂ ಮಹಿಳೆಯರ ಮೇಲೆ ಸಾಕಷ್ಟು ದೌರ್ಜನ್ಯಗಳು ನಡೆಯುತ್ತಿವೆ ಎಂದು ಅಧಿವೇಶನದಲ್ಲಿ ಹೇಳಿದ್ದಾರೆ. ಮಣಿಪುರದ ಬದಲು ರಾಜಸ್ಥಾನದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ಸರ್ಕಾರ ಗಮನ ಹರಿಸಬೇಕು. ಬೇರೆ ರಾಜ್ಯಗಳ ಬದಲು ಸ್ವಂತ ಹಿತ್ತಲನ್ನೇ ನೋಡಬೇಕು ಎಂದಿದ್ದರು.



Join Whatsapp