Home ಟಾಪ್ ಸುದ್ದಿಗಳು ಕೊಳವೆ ಬಾವಿ ಘಟನೆ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು: ಅಬ್ದುಲ್ ಮಜೀದ್

ಕೊಳವೆ ಬಾವಿ ಘಟನೆ ಮರುಕಳಿಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು: ಅಬ್ದುಲ್ ಮಜೀದ್

ಬೆಂಗಳೂರು: ವಿಜಯಪುರದಲ್ಲಿ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಎರಡು ವರ್ಷದ ಮಗು ಸಾತ್ವಿಕ್ ರಕ್ಷಣೆಗೆ ಸಂತೋಷ ವ್ಯಕ್ತಪಡಿಸಿದ ಎಸ್‌ಡಿಪಿಐ ಕರ್ನಾಟಕದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಮಗುವಿನ ರಕ್ಷಣೆ ಮಾಡುವಲ್ಲಿ ಯಶಸ್ವಿಯಾದ NDRF ಮತ್ತು SDRF ತಂಡಗಳು ಮತ್ತು ಸ್ಥಳೀಯ ಆಡಳಿತಕ್ಕೆ ಅಭಿನಂದನೆ ತಿಳಿಸಿದ್ದಾರೆ.

ಜೊತೆಗೆ, ತೆರೆದ ಕೊಳವೆ ಬಾವಿಗಳನ್ನು ಮುಚ್ಚದೆ ನಿರ್ಲಕ್ಷ್ಯ ತೋರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಸರಕಾರಕ್ಕೆ ಆಗ್ರಹಿಸಿದ್ದಾರೆ.

Join Whatsapp
Exit mobile version